September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲೋಕಸಭಾ ಚುನಾವಣೆ ಹಿನ್ನೆಲೆ: ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ ಮುಂದೂಡಿಕೆ

ನೆರಿಯ: ಸಿಯೋನ್ ಆಶ್ರಮವು ಕಳೆದ 25 ವರ್ಷಗಳಿಂದ ಅಶಕ್ತ, ಅನಾಥ ಮತ್ತು ವಿಶೇಷಚೇತನರನ್ನು ಯಾವುದೇ ಜಾತಿ- ಮತ, ಬೇಧ-ಭಾವವಿಲ್ಲದೆ ಮಾತೃವಾತ್ಸಲ್ಯತೆಯಿಂದ ಆರೈಕೆ ಮಾಡುತ್ತಾ ಬಂದಿರುತ್ತದೆ. ಮಾ.22ರಂದು ಸಿಯೋನ್ ಆಶ್ರಮವು ತನ್ನ ಸೇವೆಯ 25 ಸಂವತ್ಸರಗಳನ್ನು ಪೂರ್ಣಗೊಳಿಸಿರುತ್ತದೆ. ಈ ಸಂದರ್ಭದಲ್ಲಿ “ಸಿಯೋನ್ ರಜತಮಹೋತ್ಸವ ಮತ್ತು ಕರ್ನಾಟಕ ಸುವರ್ಣ ಸಂಭ್ರಮ”ವನ್ನು ಜಂಟಿಯಾಗಿ ಆಚರಿಸಲು ಮಾ.21 ಮತ್ತು ಮಾ.22 ರಂದು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಲೋಕಸಭೆ ಚುನಾವಣೆಯ ಪ್ರಯುಕ್ತ ಚುನಾವಣಾ ಆಯೋಗವು ಕಟ್ಟುನಿಟ್ಟಿನ ನೀತಿಸಂಹಿತೆ ಜಾರಿಗೊಳಿಸಿದೆ. ಆದುದರಿಂದ “ಸಿಯೋನ್ ಬೆಳ್ಳಿಹಬ್ಬ” ಕಾರ್ಯಕ್ರಮಕ್ಕೆ ಆಹ್ವಾನಿತ ಗಣ್ಯಾತಿಗಣ್ಯರಿಗೆ ಬರಲು ಅನಾನುಕೂಲವಾಗುವುದರಿಂದ ನಿಗದಿಪಡಿಸಲಾಗಿದ್ದ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಸಿಯೋನ್ ಆಶ್ರಮದ ಮಾನೇಜಿಂಗ್ ಟ್ರಸ್ಟಿ ಯುಸಿ ಪೌಲೋಸ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಅಪಾಯದಂಚಿನಲ್ಲಿರುವ ಗುರಿಪಳ್ಳ ತಾರಗಂಡಿ ಸೇತುವೆ: ಸ್ಥಳಕ್ಕೆ ಬೇಟಿ ನೀಡಿದ ರಕ್ಷಿತ್ ಶಿವರಾಂ ಅತೀ ಶೀಘ್ರದಲ್ಲೇ ಹೊಸ ಸೇತುವೆ ನಿರ್ಮಾಣದ ಭರವಸೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 2644 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ನಾಲ್ಕೂರು: ಅಸೌಖ್ಯದಿಂದ ಯೈಕುರಿ ವಸಂತಿ ನಿಧನ

Suddi Udaya

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುರೇಶ್ ಬಿ. ಕೌಡಂಗೆ

Suddi Udaya

ಉಜಿರೆ: ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ಸ್ವಚ್ಛತಾ ಅಭಿಯಾನ

Suddi Udaya
error: Content is protected !!