July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲೋಕಸಭಾ ಚುನಾವಣೆ ಹಿನ್ನೆಲೆ: ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ ಮುಂದೂಡಿಕೆ

ನೆರಿಯ: ಸಿಯೋನ್ ಆಶ್ರಮವು ಕಳೆದ 25 ವರ್ಷಗಳಿಂದ ಅಶಕ್ತ, ಅನಾಥ ಮತ್ತು ವಿಶೇಷಚೇತನರನ್ನು ಯಾವುದೇ ಜಾತಿ- ಮತ, ಬೇಧ-ಭಾವವಿಲ್ಲದೆ ಮಾತೃವಾತ್ಸಲ್ಯತೆಯಿಂದ ಆರೈಕೆ ಮಾಡುತ್ತಾ ಬಂದಿರುತ್ತದೆ. ಮಾ.22ರಂದು ಸಿಯೋನ್ ಆಶ್ರಮವು ತನ್ನ ಸೇವೆಯ 25 ಸಂವತ್ಸರಗಳನ್ನು ಪೂರ್ಣಗೊಳಿಸಿರುತ್ತದೆ. ಈ ಸಂದರ್ಭದಲ್ಲಿ “ಸಿಯೋನ್ ರಜತಮಹೋತ್ಸವ ಮತ್ತು ಕರ್ನಾಟಕ ಸುವರ್ಣ ಸಂಭ್ರಮ”ವನ್ನು ಜಂಟಿಯಾಗಿ ಆಚರಿಸಲು ಮಾ.21 ಮತ್ತು ಮಾ.22 ರಂದು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಲೋಕಸಭೆ ಚುನಾವಣೆಯ ಪ್ರಯುಕ್ತ ಚುನಾವಣಾ ಆಯೋಗವು ಕಟ್ಟುನಿಟ್ಟಿನ ನೀತಿಸಂಹಿತೆ ಜಾರಿಗೊಳಿಸಿದೆ. ಆದುದರಿಂದ “ಸಿಯೋನ್ ಬೆಳ್ಳಿಹಬ್ಬ” ಕಾರ್ಯಕ್ರಮಕ್ಕೆ ಆಹ್ವಾನಿತ ಗಣ್ಯಾತಿಗಣ್ಯರಿಗೆ ಬರಲು ಅನಾನುಕೂಲವಾಗುವುದರಿಂದ ನಿಗದಿಪಡಿಸಲಾಗಿದ್ದ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಸಿಯೋನ್ ಆಶ್ರಮದ ಮಾನೇಜಿಂಗ್ ಟ್ರಸ್ಟಿ ಯುಸಿ ಪೌಲೋಸ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ : 20 ಸರಕಾರಿ ಶಾಲೆಯ1500ಕ್ಕೂ ಹೆಚ್ವು ವಿದ್ಯಾರ್ಥಿಗಳು ಭಾಗಿ, ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಕೊಕ್ಕಡ: ಹಾರ ನಿವಾಸಿ ಮೋಹನ ಗೌಡ ನಿಧನ

Suddi Udaya

ವೇಣೂರಿನಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಸ್ಟಾರ್ ವುಮನ್ ಪ್ರಶಸ್ತಿಗೆ ಬೆಳ್ತಂಗಡಿಯ ಫೌಝಿಯಾ ಆಯ್ಕೆ

Suddi Udaya

ಪೆರಿಂಜೆ ಎನ್ನೆನ್ನೆಸ್ ಶಿಬಿರಕ್ಕೆ ವಿಭಾಗಾಧಿಕಾರಿ ಭೇಟಿ

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಆರ್ಥಿಕ ಸಹಾಯ

Suddi Udaya
error: Content is protected !!