July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅಕ್ರಮವಾಗಿ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

ಬೆಳ್ತಂಗಡಿ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ ಮಾ.20ರಂದು ಸಂಜೆ ನಡೆದಿದೆ.

ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ ಸ್ಥಳೀಯ ನಿವಾಸಿ ಸತೀಶ್ (40) ಎಂಬಾತ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ವೇಣೂರು ಪೊಲೀಸ್‌ ಠಾಣಾ ಉಪನಿರೀಕ್ಷಕರಾದ ಶ್ರೀಶೈಲ ಡಿ ಮುರಗೋಡ ನೇತೃತ್ವದ ಪೊಲೀಸರು ತಂಡ ದಾಳಿ ನಡೆಸಿ, ದಾಳಿ ವೇಳೆ ಆರೋಪಿಯ ವಶದಲ್ಲಿದ್ದ 90 ಎಂ.ಎಲ್. ಮದ್ಯ ತುಂಬಿದ 32 ಸ್ಯಾಚೆಟ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಮದ್ಯದ ಒಟ್ಟು ಪ್ರಮಾಣ 2.880 ಲೀಟರ್ ಆಗಿದ್ದು, ಅಂದಾಜು ಮೌಲ್ಯ ರೂ1,312/- ರೂಪಾಯಿ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Related posts

ಆದಿಗುರು ಫ್ಯಾಷನ್ ಡಿಸೈನ್ ವಿದ್ಯಾರ್ಥಿಗಳಿಂದ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಭೇಟಿ

Suddi Udaya

ಭಾರೀ ಮಳೆಗೆ ತೆಕ್ಕಾರು ಜುಮ್ಮಾ ಮಸೀದಿಯ ಆವರಣದ ತಡೆಗೋಡೆ ಕುಸಿತ

Suddi Udaya

ಹಿರಿಯ ಹಿಮ್ಮೇಳ ವಾದಕ ಧರ್ಮಸ್ಥಳದ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ನೆನಪಿನ ‘ಕುರಿಯ ಪ್ರಶಸ್ತಿ’ ಪ್ರದಾನ

Suddi Udaya

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ನಾಲ್ವರ‌ ಮೇಲೆ ಪ್ರಕರಣ ದಾಖಲು

Suddi Udaya

ವಾಣಿ ಸೌಹಾರ್ದಕೋ ಆಪರೇಟಿವ್ ಸೊಸೈಟಿ ಮಹಾಸಭೆ

Suddi Udaya

ನಾಲ್ಕೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಜನಮಂಗಳ ಯೋಜನೆಯಡಿ ಮಂಜೂರಾದ ವಾಕಿಂಗ್ ಸ್ಟಿಕ್ ಹಸ್ತಾಂತರ

Suddi Udaya
error: Content is protected !!