ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ರಾಜು ಜೋಸೆಫ್ ಅವರ ಸಾವು ಪ್ರಕರಣ ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರುವುದಾಗಿ ಮಗನಿಂದ ಠಾಣೆಗೆ ದೂರು

ಕಳೆಂಜ: ಇಲ್ಲಿಯ ಕಳೆಂಜ ನಿವಾಸಿ ರಾಜು ಜೋಸೆಫ್ ಅವರು ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರು‌ವುದಾಗಿ ಅವರ ಪುತ್ರ ಟೋನಿ ಪೊಲೀಸರಿಗೆ ದೂರು ನೀಡಿದ್ದಾರೆ.

ಕಳೆಂಜ ಗ್ರಾಮ ನಿವಾಸಿ ಮೃತ ರಾಜು ಜೋಸೆಫ್ ಅವರ ಪುತ್ರ ಟೋನಿ ಎಂಬವರು ನೀಡಿದ ದೂರಿನಂತೆ, ತಂದೆ ರಾಜು ಜೊಸೇಫ್ ರವರು ವಿಪರೀತ ಅಮಲು ಪದಾರ್ಥ ಸೇವಿಸುವ ಚಟವನ್ನು ಹೊಂದಿದ್ದು, ಮನೆಗೆ ಬಾರದೆ ದೂರದ ಊರಿಗೆ ಹೋಗಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡು, ಬಸ್ಸು ನಿಲ್ದಾಣದ ಬಳಿ ಮಲಗುತ್ತಿದ್ದವರು, ಮೂರು ವರ್ಷದ ಹಿಂದೆ ಮನೆಗೆ ಬಂದು ಹೋದವರು ವಾಪಾಸು ಮನೆಗೆ ಬಂದಿರುವುದಿಲ್ಲ. ಮಾ.20 ರಂದು ರಾಜು ಜೊಸೇಫ್ ರವರ ಕಳೆಬರ ಪುದುವೆಟ್ಟು ಗ್ರಾಮದ ಪದವು ಎಂಬಲ್ಲಿರುವ ಅರಣ್ಯ ಪ್ರದೇಶದಲ್ಲಿ ದೊರೆತಿದ್ದು, ಅಲ್ಲೆ ಇದ್ದ ಬ್ಯಾಗ್ ವೊಂದರಲ್ಲಿ ಆಧಾರ್ ಕಾರ್ಡ್ ಕೂಡಾ ದೊರೆತಿರುವುದಾಗಿ ಮಾಹಿತಿ ಬಂದಿರುತ್ತದೆ. ಸ್ಥಳಕ್ಕೆ ಹೋಗಿ ನೋಡಿದಾಗ, ತನ್ನ ತಂದೆಯ ಕಳೆಬರವೆಂದು ಕಂಡುಬಂದಿದ್ದು, ತಂದೆ ಅರಣ್ಯ ಪ್ರದೇಶದಲ್ಲಿ ಮದ್ಯಪಾನ ಮಾಡಿ ಮಲಗಿದ್ದವರು ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರು‌ವಂತೆ ಕಂಡುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್‌ ಕ್ರಮಾಂಕ:25/2024 ಕಲಂ: 174 ಸಿ ಆರ್‌ ಪಿ ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ತ್ರೋಬಾಲ್ ಪಂದ್ಯಾಟ: ಕರಂಬಾರು ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಗುರುವಾಯನಕೆರೆ ವಿದ್ವತ್ ಕಾಲೇಜಿನಲ್ಲಿ ಕಿಚನಾಮಿಕ್ಸ್ ಸಡಗರ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನ ಶ್ರೀ ಪ್ರಶಸ್ತಿ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ವಾರ್ಷಿಕೋತ್ಸವ

Suddi Udaya

ಮಹಿಳಾ ಐಟಿಐಗೆ ಶೇಕಡಾ ನೂರು ಫಲಿತಾಂಶ

Suddi Udaya

ಮೋಹನ್ ಕುಮಾರ್ ನೇತೃತ್ವದಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ “ಯಶೋ-ವಿಜಯ”ಬದುಕು-ನೆನೆಪು-ಸ್ಮರಣೆ ವಿಶೇಷ ಕಾರ್ಯಕ್ರಮ

Suddi Udaya
error: Content is protected !!