26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ರಾಜು ಜೋಸೆಫ್ ಅವರ ಸಾವು ಪ್ರಕರಣ ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರುವುದಾಗಿ ಮಗನಿಂದ ಠಾಣೆಗೆ ದೂರು

ಕಳೆಂಜ: ಇಲ್ಲಿಯ ಕಳೆಂಜ ನಿವಾಸಿ ರಾಜು ಜೋಸೆಫ್ ಅವರು ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರು‌ವುದಾಗಿ ಅವರ ಪುತ್ರ ಟೋನಿ ಪೊಲೀಸರಿಗೆ ದೂರು ನೀಡಿದ್ದಾರೆ.

ಕಳೆಂಜ ಗ್ರಾಮ ನಿವಾಸಿ ಮೃತ ರಾಜು ಜೋಸೆಫ್ ಅವರ ಪುತ್ರ ಟೋನಿ ಎಂಬವರು ನೀಡಿದ ದೂರಿನಂತೆ, ತಂದೆ ರಾಜು ಜೊಸೇಫ್ ರವರು ವಿಪರೀತ ಅಮಲು ಪದಾರ್ಥ ಸೇವಿಸುವ ಚಟವನ್ನು ಹೊಂದಿದ್ದು, ಮನೆಗೆ ಬಾರದೆ ದೂರದ ಊರಿಗೆ ಹೋಗಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡು, ಬಸ್ಸು ನಿಲ್ದಾಣದ ಬಳಿ ಮಲಗುತ್ತಿದ್ದವರು, ಮೂರು ವರ್ಷದ ಹಿಂದೆ ಮನೆಗೆ ಬಂದು ಹೋದವರು ವಾಪಾಸು ಮನೆಗೆ ಬಂದಿರುವುದಿಲ್ಲ. ಮಾ.20 ರಂದು ರಾಜು ಜೊಸೇಫ್ ರವರ ಕಳೆಬರ ಪುದುವೆಟ್ಟು ಗ್ರಾಮದ ಪದವು ಎಂಬಲ್ಲಿರುವ ಅರಣ್ಯ ಪ್ರದೇಶದಲ್ಲಿ ದೊರೆತಿದ್ದು, ಅಲ್ಲೆ ಇದ್ದ ಬ್ಯಾಗ್ ವೊಂದರಲ್ಲಿ ಆಧಾರ್ ಕಾರ್ಡ್ ಕೂಡಾ ದೊರೆತಿರುವುದಾಗಿ ಮಾಹಿತಿ ಬಂದಿರುತ್ತದೆ. ಸ್ಥಳಕ್ಕೆ ಹೋಗಿ ನೋಡಿದಾಗ, ತನ್ನ ತಂದೆಯ ಕಳೆಬರವೆಂದು ಕಂಡುಬಂದಿದ್ದು, ತಂದೆ ಅರಣ್ಯ ಪ್ರದೇಶದಲ್ಲಿ ಮದ್ಯಪಾನ ಮಾಡಿ ಮಲಗಿದ್ದವರು ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರು‌ವಂತೆ ಕಂಡುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್‌ ಕ್ರಮಾಂಕ:25/2024 ಕಲಂ: 174 ಸಿ ಆರ್‌ ಪಿ ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ: ಬುರುಡೆ ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ ಸೆ.16 ಕ್ಕೆ ಬೆಲ್ ಅದೇಶ ಕಾಯ್ದಿರಿಸಿದ ಬೆಳ್ತಂಗಡಿ ಕೋರ್ಟ್

Suddi Udaya

ಎಸ್.ಡಿ.ಎಂ. ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಉಜಿರೆ ಗ್ರಾಮ ಪಂಚಾಯತ್‌ಗೆ ಶೈಕ್ಷಣಿಕ ಅಧ್ಯಯನ ಭೇಟಿ

Suddi Udaya

ಗುರುವಾಯನಕೆರೆ ಗೆಳೆಯರ ಬಳಗ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಚಿತ್ರಕಲಾ ಪರೀಕ್ಷೆ : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ವಾಲಿಬಾಲ್ ಪಂದ್ಯಾಟ: ಪದ್ಮುಂಜ ಸರಕಾರಿ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ನೂತನವಾಗಿ ಧರ್ಮಾಧ್ಯಕ್ಷರ ಪದವಿಗೆ ನೇಮಿಸಲ್ಪಟ್ಟಿರುವ ಅತೀ ವಂ| ಫಾ| ಜೇಮ್ಸ್‌ ಪಟ್ಟೇರಿಲ್ ಅವರನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಸ್ವಾಗತ

Suddi Udaya
error: Content is protected !!