September 6, 2026
Uncategorized

ಭಾ.ಜ.ಪಾ ಬೆಳ್ತಂಗಡಿ ಮಂಡಲ ವತಿಯಿಂದ ಚುನಾವಣಾ ನಿರ್ವಹಣಾ ಸಮಿತಿಯ ಸಭೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಚುನಾವಣಾ ನಿರ್ವಹಣಾ ಸಮಿತಿಯ ಸಭೆ ಮಾ.21 ರಂದು ಬಿಜೆಪಿ ಕಚೇರಿಯಲ್ಲಿ ನಡೆಯಿತು.


ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್ ಅವರು, ಲೋಕಸಭಾ ಚುನಾವಣೆಯಲ್ಲಿ ನಿರ್ವಹಣಾ ಸಮಿತಿ ನಿರ್ವಹಿಸಬೇಕಾದ ಕಾರ್ಯನಿರ್ವಹಣೆಗಳ ಬಗ್ಗೆ, ಬೂತ್ ಸಮಿತಿಗಳ ಕಾರ್ಯನಿರ್ವಹಣೆಯ ಬಗ್ಗೆ ಸಮಗ್ರ ಮಾಹಿತಿ ನೀಡಿದರು.


ಲೋಕಸಭಾ ಚುನಾವಣಾ ಮಂಡಲ ಉಸ್ತುವಾರಿ ಹರಿಕೃಷ್ಣ ಬಂಟ್ವಾಳ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ ಉಪಸ್ಥಿತರಿದ್ದರು.
ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ವಂದಿಸಿದರು.

Related posts

ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿಲು ಇಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬ ಆಚರಣೆ

Suddi Udaya

ಗುರುವಾಯನಕೆರೆ ನವಶಕ್ತಿಕ್ರೀಡಾಂಗಣದಲ್ಲಿ ಆದ್ದೂರಿಯಾಗಿ ನಡೆದ ಐತಿಹಾಸಿಕ ನಾಟಕ “ಛತ್ರಪತಿ ಶಿವಾಜಿ”

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಕುವೆಟ್ಟು ಗ್ರಾ.ಪಂ ಸಹಯೋಗದಲ್ಲಿ ಕಣ್ಣಿನ ಉಚಿತ ತಪಾಸಣ ಶಿಬಿರ ಉದ್ಘಾಟನೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya
error: Content is protected !!