September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅಕ್ರಮವಾಗಿ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

ಬೆಳ್ತಂಗಡಿ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ ಮಾ.20ರಂದು ಸಂಜೆ ನಡೆದಿದೆ.

ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ ಸ್ಥಳೀಯ ನಿವಾಸಿ ಸತೀಶ್ (40) ಎಂಬಾತ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ವೇಣೂರು ಪೊಲೀಸ್‌ ಠಾಣಾ ಉಪನಿರೀಕ್ಷಕರಾದ ಶ್ರೀಶೈಲ ಡಿ ಮುರಗೋಡ ನೇತೃತ್ವದ ಪೊಲೀಸರು ತಂಡ ದಾಳಿ ನಡೆಸಿ, ದಾಳಿ ವೇಳೆ ಆರೋಪಿಯ ವಶದಲ್ಲಿದ್ದ 90 ಎಂ.ಎಲ್. ಮದ್ಯ ತುಂಬಿದ 32 ಸ್ಯಾಚೆಟ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಮದ್ಯದ ಒಟ್ಟು ಪ್ರಮಾಣ 2.880 ಲೀಟರ್ ಆಗಿದ್ದು, ಅಂದಾಜು ಮೌಲ್ಯ ರೂ1,312/- ರೂಪಾಯಿ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Related posts

ಕಲ್ಲೇರಿ: ಕಾರು ಮತ್ತು ಸ್ಕೂಟಿಯ ನಡುವೆ ಭೀಕರ ರಸ್ತೆ ಅಪಘಾತ: ಓರ್ವ ಮೃತ್ಯು

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಹಬ್ಬ ಆಚರಣೆ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ಅವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಸ.ಪ್ರ.ದ. ಕಾಲೇಜಿನಲ್ಲಿ ರೋವರ್ ರೇಂಜರ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಚಟುವಟಿಕೆಗಳ ಉದ್ಘಾಟನೆ

Suddi Udaya

ಇಂದಬೆಟ್ಟು: ಶತಾಯುಷಿ ಮತದಾರ ಬಂಗಾಡಿ ಅರಮನೆಯ ಬಿ. ರವಿರಾಜ್ ಬಲ್ಲಾಳ್ ರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಮಂಗಳೂರುನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗಾಗಿ ವಕೀಲರ ಸಂಘದಿಂದ ಸಮಾಲೋಚನಾ ಸಭೆ: ಮಂಗಳೂರಿನಲ್ಲಿ ನಮಗೆ ಬೇಕು ಹೈಕೋರ್ಟ್ ಪೀಠ: ಧನಂಜಯ್ ರಾವ್

Suddi Udaya
error: Content is protected !!