26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ರಾಜು ಜೋಸೆಫ್ ಅವರ ಸಾವು ಪ್ರಕರಣ ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರುವುದಾಗಿ ಮಗನಿಂದ ಠಾಣೆಗೆ ದೂರು

ಕಳೆಂಜ: ಇಲ್ಲಿಯ ಕಳೆಂಜ ನಿವಾಸಿ ರಾಜು ಜೋಸೆಫ್ ಅವರು ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರು‌ವುದಾಗಿ ಅವರ ಪುತ್ರ ಟೋನಿ ಪೊಲೀಸರಿಗೆ ದೂರು ನೀಡಿದ್ದಾರೆ.

ಕಳೆಂಜ ಗ್ರಾಮ ನಿವಾಸಿ ಮೃತ ರಾಜು ಜೋಸೆಫ್ ಅವರ ಪುತ್ರ ಟೋನಿ ಎಂಬವರು ನೀಡಿದ ದೂರಿನಂತೆ, ತಂದೆ ರಾಜು ಜೊಸೇಫ್ ರವರು ವಿಪರೀತ ಅಮಲು ಪದಾರ್ಥ ಸೇವಿಸುವ ಚಟವನ್ನು ಹೊಂದಿದ್ದು, ಮನೆಗೆ ಬಾರದೆ ದೂರದ ಊರಿಗೆ ಹೋಗಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡು, ಬಸ್ಸು ನಿಲ್ದಾಣದ ಬಳಿ ಮಲಗುತ್ತಿದ್ದವರು, ಮೂರು ವರ್ಷದ ಹಿಂದೆ ಮನೆಗೆ ಬಂದು ಹೋದವರು ವಾಪಾಸು ಮನೆಗೆ ಬಂದಿರುವುದಿಲ್ಲ. ಮಾ.20 ರಂದು ರಾಜು ಜೊಸೇಫ್ ರವರ ಕಳೆಬರ ಪುದುವೆಟ್ಟು ಗ್ರಾಮದ ಪದವು ಎಂಬಲ್ಲಿರುವ ಅರಣ್ಯ ಪ್ರದೇಶದಲ್ಲಿ ದೊರೆತಿದ್ದು, ಅಲ್ಲೆ ಇದ್ದ ಬ್ಯಾಗ್ ವೊಂದರಲ್ಲಿ ಆಧಾರ್ ಕಾರ್ಡ್ ಕೂಡಾ ದೊರೆತಿರುವುದಾಗಿ ಮಾಹಿತಿ ಬಂದಿರುತ್ತದೆ. ಸ್ಥಳಕ್ಕೆ ಹೋಗಿ ನೋಡಿದಾಗ, ತನ್ನ ತಂದೆಯ ಕಳೆಬರವೆಂದು ಕಂಡುಬಂದಿದ್ದು, ತಂದೆ ಅರಣ್ಯ ಪ್ರದೇಶದಲ್ಲಿ ಮದ್ಯಪಾನ ಮಾಡಿ ಮಲಗಿದ್ದವರು ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರು‌ವಂತೆ ಕಂಡುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್‌ ಕ್ರಮಾಂಕ:25/2024 ಕಲಂ: 174 ಸಿ ಆರ್‌ ಪಿ ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮಡಂತ್ಯಾರು: ಬುಲೆಟ್ ಟ್ಯಾಂಕರ್ ಮತ್ತು ಓಮ್ನಿ ಕಾರ್ ಮುಖಾಮುಖಿ ಡಿಕ್ಕಿ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ. ಪ್ರಾ. ಶಾಲೆಯ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ನಡ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ ಮತ್ತು ವಾರ್ಷಿಕ ಮಹಾಸಭೆ

Suddi Udaya

ರಿಕ್ಷಾ ಚಾಲಕರ ಅಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿ ಉಜಿರೆಯ ಉದ್ಯಮಿ, ಲಕ್ಷ್ಮಿ ಗ್ರೂಪ್ ನ ಮಾಲಕರಾದ ಮೋಹನ್ ಕುಮಾರ್ ಅವರಿಂದ 50 ಸಾವಿರ ದೇಣಿಗೆ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

Suddi Udaya

ಡಿ.26-27: ಕುದ್ಕೋಳಿಕಟ್ಟೆ ಗರಡಿ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!