ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ರಾಜು ಜೋಸೆಫ್ ಅವರ ಸಾವು ಪ್ರಕರಣ ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರುವುದಾಗಿ ಮಗನಿಂದ ಠಾಣೆಗೆ ದೂರು

ಕಳೆಂಜ: ಇಲ್ಲಿಯ ಕಳೆಂಜ ನಿವಾಸಿ ರಾಜು ಜೋಸೆಫ್ ಅವರು ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರು‌ವುದಾಗಿ ಅವರ ಪುತ್ರ ಟೋನಿ ಪೊಲೀಸರಿಗೆ ದೂರು ನೀಡಿದ್ದಾರೆ.

ಕಳೆಂಜ ಗ್ರಾಮ ನಿವಾಸಿ ಮೃತ ರಾಜು ಜೋಸೆಫ್ ಅವರ ಪುತ್ರ ಟೋನಿ ಎಂಬವರು ನೀಡಿದ ದೂರಿನಂತೆ, ತಂದೆ ರಾಜು ಜೊಸೇಫ್ ರವರು ವಿಪರೀತ ಅಮಲು ಪದಾರ್ಥ ಸೇವಿಸುವ ಚಟವನ್ನು ಹೊಂದಿದ್ದು, ಮನೆಗೆ ಬಾರದೆ ದೂರದ ಊರಿಗೆ ಹೋಗಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡು, ಬಸ್ಸು ನಿಲ್ದಾಣದ ಬಳಿ ಮಲಗುತ್ತಿದ್ದವರು, ಮೂರು ವರ್ಷದ ಹಿಂದೆ ಮನೆಗೆ ಬಂದು ಹೋದವರು ವಾಪಾಸು ಮನೆಗೆ ಬಂದಿರುವುದಿಲ್ಲ. ಮಾ.20 ರಂದು ರಾಜು ಜೊಸೇಫ್ ರವರ ಕಳೆಬರ ಪುದುವೆಟ್ಟು ಗ್ರಾಮದ ಪದವು ಎಂಬಲ್ಲಿರುವ ಅರಣ್ಯ ಪ್ರದೇಶದಲ್ಲಿ ದೊರೆತಿದ್ದು, ಅಲ್ಲೆ ಇದ್ದ ಬ್ಯಾಗ್ ವೊಂದರಲ್ಲಿ ಆಧಾರ್ ಕಾರ್ಡ್ ಕೂಡಾ ದೊರೆತಿರುವುದಾಗಿ ಮಾಹಿತಿ ಬಂದಿರುತ್ತದೆ. ಸ್ಥಳಕ್ಕೆ ಹೋಗಿ ನೋಡಿದಾಗ, ತನ್ನ ತಂದೆಯ ಕಳೆಬರವೆಂದು ಕಂಡುಬಂದಿದ್ದು, ತಂದೆ ಅರಣ್ಯ ಪ್ರದೇಶದಲ್ಲಿ ಮದ್ಯಪಾನ ಮಾಡಿ ಮಲಗಿದ್ದವರು ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರು‌ವಂತೆ ಕಂಡುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್‌ ಕ್ರಮಾಂಕ:25/2024 ಕಲಂ: 174 ಸಿ ಆರ್‌ ಪಿ ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಎಕ್ಸೆಲ್ ಕಾಲೇಜಿನಲ್ಲಿ ಗಣರಾಜ್ಯೋತ್ಸವ

Suddi Udaya

ಉಜಿರೆ ಶ್ರೀ ಧ. ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಾಂತ್ರಿಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ

Suddi Udaya

ಆರಂಬೋಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ದ.ಕ. ಜಿಲ್ಲೆಯಲ್ಲಿ ಗಣೇಶ ಚತುರ್ಥಿಗೆ ಸೆ.19 ರಂದು ಸರ್ಕಾರಿ ರಜೆ

Suddi Udaya

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ

Suddi Udaya
error: Content is protected !!