July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ರಾಜು ಜೋಸೆಫ್ ಅವರ ಸಾವು ಪ್ರಕರಣ ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರುವುದಾಗಿ ಮಗನಿಂದ ಠಾಣೆಗೆ ದೂರು

ಕಳೆಂಜ: ಇಲ್ಲಿಯ ಕಳೆಂಜ ನಿವಾಸಿ ರಾಜು ಜೋಸೆಫ್ ಅವರು ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರು‌ವುದಾಗಿ ಅವರ ಪುತ್ರ ಟೋನಿ ಪೊಲೀಸರಿಗೆ ದೂರು ನೀಡಿದ್ದಾರೆ.

ಕಳೆಂಜ ಗ್ರಾಮ ನಿವಾಸಿ ಮೃತ ರಾಜು ಜೋಸೆಫ್ ಅವರ ಪುತ್ರ ಟೋನಿ ಎಂಬವರು ನೀಡಿದ ದೂರಿನಂತೆ, ತಂದೆ ರಾಜು ಜೊಸೇಫ್ ರವರು ವಿಪರೀತ ಅಮಲು ಪದಾರ್ಥ ಸೇವಿಸುವ ಚಟವನ್ನು ಹೊಂದಿದ್ದು, ಮನೆಗೆ ಬಾರದೆ ದೂರದ ಊರಿಗೆ ಹೋಗಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡು, ಬಸ್ಸು ನಿಲ್ದಾಣದ ಬಳಿ ಮಲಗುತ್ತಿದ್ದವರು, ಮೂರು ವರ್ಷದ ಹಿಂದೆ ಮನೆಗೆ ಬಂದು ಹೋದವರು ವಾಪಾಸು ಮನೆಗೆ ಬಂದಿರುವುದಿಲ್ಲ. ಮಾ.20 ರಂದು ರಾಜು ಜೊಸೇಫ್ ರವರ ಕಳೆಬರ ಪುದುವೆಟ್ಟು ಗ್ರಾಮದ ಪದವು ಎಂಬಲ್ಲಿರುವ ಅರಣ್ಯ ಪ್ರದೇಶದಲ್ಲಿ ದೊರೆತಿದ್ದು, ಅಲ್ಲೆ ಇದ್ದ ಬ್ಯಾಗ್ ವೊಂದರಲ್ಲಿ ಆಧಾರ್ ಕಾರ್ಡ್ ಕೂಡಾ ದೊರೆತಿರುವುದಾಗಿ ಮಾಹಿತಿ ಬಂದಿರುತ್ತದೆ. ಸ್ಥಳಕ್ಕೆ ಹೋಗಿ ನೋಡಿದಾಗ, ತನ್ನ ತಂದೆಯ ಕಳೆಬರವೆಂದು ಕಂಡುಬಂದಿದ್ದು, ತಂದೆ ಅರಣ್ಯ ಪ್ರದೇಶದಲ್ಲಿ ಮದ್ಯಪಾನ ಮಾಡಿ ಮಲಗಿದ್ದವರು ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರು‌ವಂತೆ ಕಂಡುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್‌ ಕ್ರಮಾಂಕ:25/2024 ಕಲಂ: 174 ಸಿ ಆರ್‌ ಪಿ ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ ಶ್ರೀವಿಶ್ವಕರ್ಮಾಭ್ಯುದಯ ಸಭಾದಿಂದ ಶ್ರೀವಿಶ್ವಕರ್ಮಯಜ್ಞ ಮತ್ತು ಪೂಜೆ

Suddi Udaya

ಪ್ರತಿಷ್ಟಿತ ಎಳ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್‌.ಡಿ.ಎಂ. ಐಟಿಐ ವೇಣೂರಿನಲ್ಲಿ ಯಂತ್ರಗಳ ಬಿಡಿಭಾಗ ತಯಾರಿಕಾ ಕಂಪೆನಿಯಿಂದ ಕ್ಯಾಂಪಸ್ ಸಂದರ್ಶನ

Suddi Udaya

ಕಣಿಯೂರು: ಚಂದ್ರಯ್ಯ ಆಚಾರ್ಯ ನಿಧನ

Suddi Udaya

ಮುಂಡಾಜೆ: ನೀಲಮ್ಮ ನಾಯ್ಕ ನಿಧನ

Suddi Udaya

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

Suddi Udaya
error: Content is protected !!