September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಲಿಂಗ ಸಮಾನತೆ ಬಗ್ಗೆ ತರಬೇತಿ

ಬೆಳ್ತಂಗಡಿ : ಶಕ್ತಿ ಸಾಮರ್ಥ್ಯವನ್ನು ಬೆಳೆಸಿದಾಗ ನಾವು ಕೂಡ ಬೆಳೆಯುತ್ತೇವೆ. ಸಮಾಜದಲ್ಲಿ ಬದಲಾವಣೆ ನಮ್ಮಿಂದ ಆಗಬೇಕಾಗಿದೆ ಎಂದು ಮಾ. 20 ರಂದು ಸಾಂತೋಮ್ ಟವರ್ ಬೆಳ್ತಂಗಡಿ ಇಲ್ಲಿ ಆಯೋಜಿಸಿದ ಲಿಂಗ ಸಮಾನತೆ ಬಗ್ಗೆ ತರಬೇತಿ ಕಾರ್ಯಾಗಾರದಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂ.ಫಾ.ಬಿನೋಯಿ ಎ.ಜೆ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಎಲಿಯಮ್ಮ ತೋಮಸ್ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಸಿ. ನ್ಯಾನ್ಸಿ ಲೋಬೊ, ಮಹಿಳಾ ಸಬಲೀಕರಣ ಯೋಜನೆಯ ರಾಜ್ಯ ಸಂಯೋಜಕರು, ಕ್ರಾಸ್ ಸಂಸ್ಥೆ ಬೆಂಗಳೂರು ಇವರು ಲಿಂಗ ಸಮಾನತೆ ಮತ್ತು ಲಿಂಗತ್ವದ ವಿಚಾರಗಳ ಬಗ್ಗೆ ತರಬೇತಿ ನೀಡಿದರು. ಮಹಿಳಾ ಒಕ್ಕೂಟ ಮತ್ತು ಮಹಾಸಂಘ ಸದಸ್ಯರು ಹಾಗೂ ಸಂತ ಎಲೋಶಿಯಸ್ ಕಾಲೇಜು ಮಂಗಳೂರು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು ಇಲ್ಲಿನ ಸಮಾಜ ಕಾರ್ಯ ವಿಭಾಗ ವಿಧ್ಯಾರ್ಥಿಗಳು ಡಿ.ಕೆ.ಆರ್.ಡಿ.ಎಸ್ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ಜಿಲ್ಲಾ ಒಕ್ಕೂಟದ ಕಾರ್ಯದರ್ಶಿ ಶ್ರೀಮತಿ ಡೈಸಿ ಜೋಯ್ ಎಲ್ಲರನ್ನು ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಶ್ರೀಮತಿ ಲಲಿತಾ ವಂದಿಸಿದರು. ಕಾರ್ಯಕರ್ತರಾದ ಮಾರ್ಕ್ ಡಿ ಸೋಜ ರವರು ಕಾರ್ಯಕ್ರಮ ನಿರೂಪಿಸಿದರು.

Related posts

ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ಗುರುವಾರ, ಶುಭ ಶುಕ್ರವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹೇಂದ್ರ ಕಂಪನಿಯ ಹೊಸ ಮಾದರಿಯ ಕಾರು ಕೊಡುಗೆ

Suddi Udaya

ಪೆರಾಡಿ :ಬಂಟರ ಸಂಘ (ರಿ.)ಬೆಳ್ತಂಗಡಿ ಮತ್ತು ಬಂಟರ ಗ್ರಾಮ ಸಮಿತಿ ಪೆರಾಡಿ ಇದರ ಸರ್ವ ಸದಸ್ಯರ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಪಕ್ಷದ ಬೆಂಬಲಿಗರು ಫೇಸ್ ಬುಕ್‌ನಲ್ಲಿ ನನ್ನ ಬಗ್ಗೆ ಸುಳ್ಳು ಅಪಪ್ರಚಾರವನ್ನು ಮಾಡುತ್ತಿದ್ದಾರೆ. ಇದು ನನ್ನ ಸ್ಪರ್ಧೆಯಿಂದ ಅವರಿಗೆ ಹಿನ್ನಡೆಯಾಗುವ ಭಯ: ಜೆಡಿಎಸ್ ಅಭ್ಯರ್ಥಿ ಆಶ್ರಫ್‌ ಆಲಿಕುಂಞಿ

Suddi Udaya

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆ

Suddi Udaya

ಹೊಸಂಗಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ‘ನನ್ನ ಗಿಡ ನನ್ನ ಮರ’ ಮತ್ತು ‘ನನ್ನ ನೆಲ ನನ್ನ ಜಲ’ ವಿನೂತನ ಸಪ್ತಾಹ

Suddi Udaya
error: Content is protected !!