September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

ಬೆಳ್ತಂಗಡಿ: ರಾಷ್ಟ್ರವನ್ನು ಕಟ್ಟುವ ಶಕ್ತಿಯನ್ನು ಸೃಷ್ಟಿಸುವುದು ಶಿಕ್ಷಣದ ಉದ್ದೇಶ. ಶಿಕ್ಷಕರು ಜೀವನಪೂರ್ತಿ ಸ್ವಯಂ ಕಲಿಕೆ ಮಾಡುವ ವಿದ್ಯಾರ್ಥಿಗಳನ್ನು ಸೃಷ್ಟಿಸಬೇಕೆಂದು ಕಾರ್ಯಕ್ರಮವನ್ನು ಉದ್ಘಾಟಿಸಿ, ಸುರೇಶ್ ಆಚಾರ್ಯ, ಮುಖ್ಯೊಪಾಧ್ಯಾಯರು, ದ.ಕ.ಜಿ.ಪಂ.ಹಿ.ಪ್ರಾಥಮಿಕ ಶಾಲೆ, ದೊಂಪದಪಲ್ಕೆ ಇವರು ಮಾತನಾಡಿದರು.

ಬೆಳ್ತಂಗಡಿ, ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ದ.ಕ.ಜಿ.ಪಂ.ಹಿ.ಪ್ರಾಥಮಿಕ ಶಾಲೆ, ದೊಂಪದಪಲ್ಕೆ,ಉಜಿರೆ ಇಲ್ಲಿ ಹಮ್ಮಿಕೊಂಡಿದ್ದೇವೆ. ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭವನ್ನು ಸುರೇಶ್ ಆಚಾರ್ಯ ಮುಖ್ಯೊಪಾಧ್ಯಾಯರು, ದ.ಕ .ಜಿ. ಪಂ. ಹಿ . ಪ್ರಾಥಮಿಕ ಶಾಲೆ ದೊಂಪದಪಲ್ಕೆ ಇವರು ನೆರವೇರಿಸಿದರು.

ಬದುಕಿನ ಜೀವನ ಎಲ್ಲವನ್ನು ಕಲಿಸುತ್ತದೆ. ಎನ್.ಎಸ್.ಎಸ್ ಎಂದರೆ ನಾನು ಸದಾ ಸಿದ್ಧ ಮತ್ತು ನಾನು ಶಿಸ್ತಿನ ಸಿಪಾಯಿ ಎಂದು ಅರ್ಥೈಸಬಹುದು, ಪ್ರಜಾಪ್ರಭುತ್ವ ದೇಶದಲ್ಲಿ ಬದುಕುವ ಹಾಗೆ ನಿಸ್ವಾರ್ಥ ಸೇವೆಯಲ್ಲಿ ಮತ್ತು ಬೇರೆ ವ್ಯಕ್ತಿಗಳೊಂದಿಗೆ ಮೆಚ್ಚುಗೆಯಾಗಿ ಗುರುತಿಸಿಕೊಂಡು ಮಾನವೀಯತೆಯನ್ನು ಎತ್ತಿ ತೋರಿಸುವ ಅಗತ್ಯವನ್ನು ಕಲ್ಪಿಸುತ್ತದೆ ಎಂದು ಮೋಹನ್ ಗೌಡ ಕಲ್ಮಂಜ, ಆಡಳಿತ ನಿರ್ದೇಶಕರು, ಕರ್ನಾಟಕ ಆರ್ಗನಿಕ್ ಫೌಂಡೇಶನ್ ಮಂಗಳೂರು ಇವರ ಕಾರ್ಯಕ್ರಮದ ಕುರಿತು ಮಾತನಾಡಿದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ ವಹಿಸಿದ್ದರು.

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಪ್ರಮಾಣ ವಚನ ಬೋಧಿಸಿದರು.

ವೇದಿಕೆಯಲ್ಲಿ ಸೀತಾರಾಮ ಶೆಟ್ಟಿ , ಅಧ್ಯಕ್ಷರು ಶ್ರೀ ವ್ಯಾಘ್ರ ಚಾಮುಂಡಿ ಸೇವಾ ಟ್ರಸ್ಟ್ ,ಓಡಲ, ಶ್ರೀಮತಿ ಜಮನ ಕೆ. ಎಸ್, ಮುಖ್ಯೋಪಾಧ್ಯಾಯರು ಸರಕಾರಿ ಪ್ರೌಢಶಾಲೆ ಬದನಾಜೆ, ಬಿ.ಎ.ಶಮೀಯುಲ್ಲಾ, ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಇವರು ಉಪಸ್ಥಿತರಿದ್ದರು.

ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ರೀಮತಿ ಪವಿತ್ರ ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರೀಯ ಸೇವಾ ಯೋಜನೆ ಯೋಜನಾಧಿಕಾರಿ ಬಿ .ಎ. ಶಮೀಯುಲ್ಲಾ ಸ್ವಾಗತಿಸಿದರು. ಇತಿಹಾಸ ವಿಭಾಗದ ಉಪನ್ಯಾಸಕಿ ಅಂಬಿಕ ವಂದಿಸಿದರು.

Related posts

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ರಾಜ್ಯ ಪ್ರಶಸ್ತಿಗೆ ಪತ್ರಕರ್ತ ಪ್ರದೀಶ್ ಮರೋಡಿ ಆಯ್ಕೆ

Suddi Udaya

ಬೆಳ್ತಂಗಡಿ ಧಾರ್ಮಿಕ ಹಾಗೂ ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ರವರಿಗೆ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮತ ಚಲಾಯಿಸಿದ ಧರ್ಮಸ್ಥಳ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ್

Suddi Udaya

ಸುಲ್ಕೇರಿ ಗ್ರಾಮದ ನಾಲ್ಕು ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

Suddi Udaya

ರೆಖ್ಯ: ಅಶ್ವಿತ್ ಕುಮಾರ್ ನಾಪತ್ತೆ ಪ್ರಕರಣ: ಮೂರು ದಿನಗಳ ಬಳಿಕ ಶಿರಾಡಿ ಗ್ರಾಮದ ಕುಕ್ಕುಂಜ ಸಮೀಪ ಹೊಳೆ ಬದಿಯಲ್ಲಿ ಪತ್ತೆ ಹಚ್ಚಿದ “ಶೌರ್ಯ” ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ

Suddi Udaya
error: Content is protected !!