32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾ.22-23: ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ಶಿರ್ಲಾಲು: ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನ ನೆಲ್ಲಿಗುಡ್ಡೆ & ಜಾತ್ರಾ ಸಮಿತಿ ಶಿರ್ಲಾಲು-ಕರಂಬಾರು-ನಲ್ಲಾರು ಗ್ರಾಮಗಳ ಕೂಡುವಿಕೆಯಿಂದ ಮಾ.22 ರಂದು ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನದ ಸನ್ನಿಧಿಯಲ್ಲಿ ಅರ್ಚಕರರಾದ ಸೂರ್‍ಯನಾರಾಯಣ ರಾವ್ ಪೌರೋಹಿತ್ಯದಲ್ಲಿ 22ನೇ ವರ್ಷದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಜರಗಲಿರುವುದು.


ಮಾ.20 ರಂದು ಬೆಳಿಗ್ಗೆ ಜಾತ್ರಾ ಮುಹೂರ್ತ, ಮಾ.22 ರಂದು ಬೆಳಿಗ್ಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಗಣಹೋಮ, ಕಲಶಾಭಿಷೇಕ, ದೈವಗಳಿಗೆ-ಪಂಚಪರ್ವ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಜಯರಾಮ್ ಕರಂಬಾರು ಮ್ಯೂಸಿಕಲಿ ಬಳಗದವರಿಂದ ಎದೆತುಂಬಿ ಹಾಡುವೆನು, ಸಂಗೀತ ರಸಮಂಜರಿ ಮತ್ತು ಕರಂಬಾರು, ಶಿರ್ಲಾಲು ಗ್ರಾಮದ ಶಾಲಾ ಮಕ್ಕಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ಶಿರ್ಲಾಲು ಪುದ್ದರಬೈಲು ದಿ| ಬೂಬ ಇವರ ಮನೆಯಿಂದ ಕಾನದ-ಕಟದ ಹಾಗೂ ಪರಿವಾರ ದೈವಗಳ ಭಂಡಾರ ಹೊರಡುವುದು. ರಾತ್ರಿ ಸಭಾ ಕಾರ್ಯಕ್ರಮ, ಕಾನದ-ಕಟದರ ದರ್ಶನ ಸೇವೆ, ಶ್ರೀ ಚಾಮುಂಡಿ, ಗುಳಿಗ ಗಗ್ಗರ ಸೇವೆ, ರಾತ್ರಿ 12 ಗಂಟೆಗೆ ಲಕ್ಕಿಡಿಪ್ ಡ್ರಾ ನಡೆಯಲಿದೆ.

ಮಾ.23ರಂದು ಬೆಳಿಗ್ಗೆ ಅಲೇರಾ ಪಂಜುರ್ಲಿ ಗಗ್ಗರ ಸೇವೆ, ರಾತ್ರಿ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿರ್ಲಾಲು ನೆಲ್ಲಿಗುಡ್ಡೆ ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಜಾತ್ರಾ ಸಮಿತಿ ಅಧ್ಯಕ್ಷ ರವಿ ಕುಂಟಲಕಜೆ ವಹಿಸಲಿದ್ದಾರೆ. ಮೂಡಬಿದ್ರೆ ಆಳ್ವಾಸ್ ಕಾಲೇಜು ಪ್ರಾಧ್ಯಾಪಕ ಡಾ| ಯೋಗೀಶ್ ಕೈರೋಡಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಬಾಬು ಎ. ತಿಳಿಸಿದ್ದಾರೆ.

Related posts

ಕುದ್ಯಾಡಿ ಸ.ಪ್ರಾ. ಶಾಲೆಯ ಅಗತ್ಯತೆಗೆ ಟೀಂ ಅಭಯಹಸ್ತ ಬೆಳ್ತಂಗಡಿ ವತಿಯಿಂದ ಆರ್ಥಿಕ ಸಹಕಾರ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ನಾವೂರು ಗ್ರಾಮ ಪಂಚಾಯತ್ ನಲ್ಲಿ ರೈತರಿಗೆ ಒಂದು ದಿನದ ಕೃಷಿ ತರಬೇತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡದ ಹಿನ್ನೆಲೆ ಜಾಮೀನು ಸಿಕ್ಕರೂ ಬಿಡುಗಡೆಯಾಗದ ಚಿನ್ನಯ್ಯ

Suddi Udaya

ಬಂದಾರು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳಿಂದ ಶ್ರಮದಾನ

Suddi Udaya

ಪುಂಜಾಲಕಟ್ಟೆ: ವ್ಯಕ್ತಿತ್ವ ವಿಕಸನ ಮತ್ತು ಸಮಯ ನಿರ್ವಹಣೆಯ ಬಗ್ಗೆ ಕಾರ್ಯಾಗಾರ

Suddi Udaya
error: Content is protected !!