April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾ.22-23: ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ಶಿರ್ಲಾಲು: ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನ ನೆಲ್ಲಿಗುಡ್ಡೆ & ಜಾತ್ರಾ ಸಮಿತಿ ಶಿರ್ಲಾಲು-ಕರಂಬಾರು-ನಲ್ಲಾರು ಗ್ರಾಮಗಳ ಕೂಡುವಿಕೆಯಿಂದ ಮಾ.22 ರಂದು ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನದ ಸನ್ನಿಧಿಯಲ್ಲಿ ಅರ್ಚಕರರಾದ ಸೂರ್‍ಯನಾರಾಯಣ ರಾವ್ ಪೌರೋಹಿತ್ಯದಲ್ಲಿ 22ನೇ ವರ್ಷದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಜರಗಲಿರುವುದು.


ಮಾ.20 ರಂದು ಬೆಳಿಗ್ಗೆ ಜಾತ್ರಾ ಮುಹೂರ್ತ, ಮಾ.22 ರಂದು ಬೆಳಿಗ್ಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಗಣಹೋಮ, ಕಲಶಾಭಿಷೇಕ, ದೈವಗಳಿಗೆ-ಪಂಚಪರ್ವ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಜಯರಾಮ್ ಕರಂಬಾರು ಮ್ಯೂಸಿಕಲಿ ಬಳಗದವರಿಂದ ಎದೆತುಂಬಿ ಹಾಡುವೆನು, ಸಂಗೀತ ರಸಮಂಜರಿ ಮತ್ತು ಕರಂಬಾರು, ಶಿರ್ಲಾಲು ಗ್ರಾಮದ ಶಾಲಾ ಮಕ್ಕಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ಶಿರ್ಲಾಲು ಪುದ್ದರಬೈಲು ದಿ| ಬೂಬ ಇವರ ಮನೆಯಿಂದ ಕಾನದ-ಕಟದ ಹಾಗೂ ಪರಿವಾರ ದೈವಗಳ ಭಂಡಾರ ಹೊರಡುವುದು. ರಾತ್ರಿ ಸಭಾ ಕಾರ್ಯಕ್ರಮ, ಕಾನದ-ಕಟದರ ದರ್ಶನ ಸೇವೆ, ಶ್ರೀ ಚಾಮುಂಡಿ, ಗುಳಿಗ ಗಗ್ಗರ ಸೇವೆ, ರಾತ್ರಿ 12 ಗಂಟೆಗೆ ಲಕ್ಕಿಡಿಪ್ ಡ್ರಾ ನಡೆಯಲಿದೆ.

ಮಾ.23ರಂದು ಬೆಳಿಗ್ಗೆ ಅಲೇರಾ ಪಂಜುರ್ಲಿ ಗಗ್ಗರ ಸೇವೆ, ರಾತ್ರಿ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿರ್ಲಾಲು ನೆಲ್ಲಿಗುಡ್ಡೆ ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಜಾತ್ರಾ ಸಮಿತಿ ಅಧ್ಯಕ್ಷ ರವಿ ಕುಂಟಲಕಜೆ ವಹಿಸಲಿದ್ದಾರೆ. ಮೂಡಬಿದ್ರೆ ಆಳ್ವಾಸ್ ಕಾಲೇಜು ಪ್ರಾಧ್ಯಾಪಕ ಡಾ| ಯೋಗೀಶ್ ಕೈರೋಡಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಬಾಬು ಎ. ತಿಳಿಸಿದ್ದಾರೆ.

Related posts

ಬೆಳ್ತಂಗಡಿ : ಲಾರಿ- ಬೈಕ್ ಅಪಘಾತದಲ್ಲಿ ಇಬ್ಬರು ಸಾವು ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಿಂದ ಲಾರಿ ಚಾಲಕನಿಗೆ ದಂಡ ಹಾಗೂ ಜೈಲು ಶಿಕ್ಷೆ ಪ್ರಕಟ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ತುಳು ಭಾಷಣ ಸ್ಪರ್ಧೆ: ಬೆಳಾಲು ಪ್ರೌಢಶಾಲೆಯ ಕು. ಕೀರ್ತನಾ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಮೆಸ್ಕಾಂ ವಿಜಿಲೆನ್ಸ್ ಎ ಡಬ್ಲ್ಯೂ ಇ ಪ್ರವೀಣ್ ಹಾಗೂ ಮೆಸ್ಕಾಂ ವಿಜಿಲೆನ್ಸ್ ಪೊಲೀಸ್ ಭೇಟಿ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್‍ಸ್‌ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

Suddi Udaya

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya

ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಆಕಾಶ್ ಎಸ್ ರಿಗೆ ಕಮಿಟೆಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya
error: Content is protected !!