25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ರಾಜು ಜೋಸೆಫ್ ಅವರ ಸಾವು ಪ್ರಕರಣ ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರುವುದಾಗಿ ಮಗನಿಂದ ಠಾಣೆಗೆ ದೂರು

ಕಳೆಂಜ: ಇಲ್ಲಿಯ ಕಳೆಂಜ ನಿವಾಸಿ ರಾಜು ಜೋಸೆಫ್ ಅವರು ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರು‌ವುದಾಗಿ ಅವರ ಪುತ್ರ ಟೋನಿ ಪೊಲೀಸರಿಗೆ ದೂರು ನೀಡಿದ್ದಾರೆ.

ಕಳೆಂಜ ಗ್ರಾಮ ನಿವಾಸಿ ಮೃತ ರಾಜು ಜೋಸೆಫ್ ಅವರ ಪುತ್ರ ಟೋನಿ ಎಂಬವರು ನೀಡಿದ ದೂರಿನಂತೆ, ತಂದೆ ರಾಜು ಜೊಸೇಫ್ ರವರು ವಿಪರೀತ ಅಮಲು ಪದಾರ್ಥ ಸೇವಿಸುವ ಚಟವನ್ನು ಹೊಂದಿದ್ದು, ಮನೆಗೆ ಬಾರದೆ ದೂರದ ಊರಿಗೆ ಹೋಗಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡು, ಬಸ್ಸು ನಿಲ್ದಾಣದ ಬಳಿ ಮಲಗುತ್ತಿದ್ದವರು, ಮೂರು ವರ್ಷದ ಹಿಂದೆ ಮನೆಗೆ ಬಂದು ಹೋದವರು ವಾಪಾಸು ಮನೆಗೆ ಬಂದಿರುವುದಿಲ್ಲ. ಮಾ.20 ರಂದು ರಾಜು ಜೊಸೇಫ್ ರವರ ಕಳೆಬರ ಪುದುವೆಟ್ಟು ಗ್ರಾಮದ ಪದವು ಎಂಬಲ್ಲಿರುವ ಅರಣ್ಯ ಪ್ರದೇಶದಲ್ಲಿ ದೊರೆತಿದ್ದು, ಅಲ್ಲೆ ಇದ್ದ ಬ್ಯಾಗ್ ವೊಂದರಲ್ಲಿ ಆಧಾರ್ ಕಾರ್ಡ್ ಕೂಡಾ ದೊರೆತಿರುವುದಾಗಿ ಮಾಹಿತಿ ಬಂದಿರುತ್ತದೆ. ಸ್ಥಳಕ್ಕೆ ಹೋಗಿ ನೋಡಿದಾಗ, ತನ್ನ ತಂದೆಯ ಕಳೆಬರವೆಂದು ಕಂಡುಬಂದಿದ್ದು, ತಂದೆ ಅರಣ್ಯ ಪ್ರದೇಶದಲ್ಲಿ ಮದ್ಯಪಾನ ಮಾಡಿ ಮಲಗಿದ್ದವರು ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರು‌ವಂತೆ ಕಂಡುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್‌ ಕ್ರಮಾಂಕ:25/2024 ಕಲಂ: 174 ಸಿ ಆರ್‌ ಪಿ ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕಳೆಂಜ ಗ್ರಾಮ ಪಂಚಾಯತ್ ವತಿಯಿಂದ ನಿವೃತ್ತ ಸೈನಿಕ ಕೆ. ಮಹಾಬಲ ಕಾಂತ್ರೇಲು ಮತ್ತು ಹಿರಿಯ ಪಶು ವೈದ್ಯ ಯಾದವ ಗೌಡ ರವರಿಗೆ ಸನ್ಮಾನ

Suddi Udaya

ಉರುವಾಲು ಗ್ರಾಮದ ಬನಾರಿಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ

Suddi Udaya

ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ರವರಿಗೆ ಚಿನ್ನದ ಪದಕ

Suddi Udaya

ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಸ್ಪರ್ಧಿಸುವ ಅಪೇಕ್ಷೆ: ಪತ್ರಿಕಾಗೋಷ್ಠಿ

Suddi Udaya

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ತಿ

Suddi Udaya

ರಾತ್ರಿ ಬೀಟ್ ಕರ್ತವ್ಯದ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ : ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳಾದ ಅರಸಿನಮಕ್ಕಿಯ ಸಚಿನ್ ಹಾಗೂ ನೆಲ್ಯಾಡಿಯ ಚಂದನ್ ಬಂಧನ*

Suddi Udaya
error: Content is protected !!