23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ರಾಜು ಜೋಸೆಫ್ ಅವರ ಸಾವು ಪ್ರಕರಣ ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರುವುದಾಗಿ ಮಗನಿಂದ ಠಾಣೆಗೆ ದೂರು

ಕಳೆಂಜ: ಇಲ್ಲಿಯ ಕಳೆಂಜ ನಿವಾಸಿ ರಾಜು ಜೋಸೆಫ್ ಅವರು ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರು‌ವುದಾಗಿ ಅವರ ಪುತ್ರ ಟೋನಿ ಪೊಲೀಸರಿಗೆ ದೂರು ನೀಡಿದ್ದಾರೆ.

ಕಳೆಂಜ ಗ್ರಾಮ ನಿವಾಸಿ ಮೃತ ರಾಜು ಜೋಸೆಫ್ ಅವರ ಪುತ್ರ ಟೋನಿ ಎಂಬವರು ನೀಡಿದ ದೂರಿನಂತೆ, ತಂದೆ ರಾಜು ಜೊಸೇಫ್ ರವರು ವಿಪರೀತ ಅಮಲು ಪದಾರ್ಥ ಸೇವಿಸುವ ಚಟವನ್ನು ಹೊಂದಿದ್ದು, ಮನೆಗೆ ಬಾರದೆ ದೂರದ ಊರಿಗೆ ಹೋಗಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡು, ಬಸ್ಸು ನಿಲ್ದಾಣದ ಬಳಿ ಮಲಗುತ್ತಿದ್ದವರು, ಮೂರು ವರ್ಷದ ಹಿಂದೆ ಮನೆಗೆ ಬಂದು ಹೋದವರು ವಾಪಾಸು ಮನೆಗೆ ಬಂದಿರುವುದಿಲ್ಲ. ಮಾ.20 ರಂದು ರಾಜು ಜೊಸೇಫ್ ರವರ ಕಳೆಬರ ಪುದುವೆಟ್ಟು ಗ್ರಾಮದ ಪದವು ಎಂಬಲ್ಲಿರುವ ಅರಣ್ಯ ಪ್ರದೇಶದಲ್ಲಿ ದೊರೆತಿದ್ದು, ಅಲ್ಲೆ ಇದ್ದ ಬ್ಯಾಗ್ ವೊಂದರಲ್ಲಿ ಆಧಾರ್ ಕಾರ್ಡ್ ಕೂಡಾ ದೊರೆತಿರುವುದಾಗಿ ಮಾಹಿತಿ ಬಂದಿರುತ್ತದೆ. ಸ್ಥಳಕ್ಕೆ ಹೋಗಿ ನೋಡಿದಾಗ, ತನ್ನ ತಂದೆಯ ಕಳೆಬರವೆಂದು ಕಂಡುಬಂದಿದ್ದು, ತಂದೆ ಅರಣ್ಯ ಪ್ರದೇಶದಲ್ಲಿ ಮದ್ಯಪಾನ ಮಾಡಿ ಮಲಗಿದ್ದವರು ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರು‌ವಂತೆ ಕಂಡುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್‌ ಕ್ರಮಾಂಕ:25/2024 ಕಲಂ: 174 ಸಿ ಆರ್‌ ಪಿ ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಕಾರ್ಯದರ್ಶಿಯಾಗಿ‌ ಸಂದೇಶ್ ಶೆಟ್ಟಿ ರಾಮನಗರ ಆಯ್ಕೆ

Suddi Udaya

ನ. 26: ಮಲೆಬೆಟ್ಟು ಶ್ರೀ ಮಹಾಗಣಪತಿ, ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಷಷ್ಠಿ ವಿಶೇಷ ಪೂಜೆ

Suddi Udaya

ಸೆ.23: ಬೆಳ್ತಂಗಡಿ ಸುನ್ನೀ ಕೋ-ಆರ್ಡಿನೇಶನ್ ಸಮಿತಿ ವತಿಯಿಂದ “ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್‌” ವಿಶೇಷ ಮೌಲಿದ್ ಪಾರಾಯಣ ಹಾಗೂ ಬುರ್ದಾ ಕಾರ್ಯಕ್ರಮ

Suddi Udaya

ನಾಳ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಾಲೋಚನೆ ಸಭೆ

Suddi Udaya

ಡಿ.19: ಅಳದಂಗಡಿ ನಮ ಮಾತೆರ್ಲ ಒಂಜೇ ಕಲಾ ತಂಡದ 18ನೇ ವಾರ್ಷಿಕೋತ್ಸವ: ಯಕ್ಷಗಾನ ಬಯಲಾಟ, ಸಾಧಕರಿಗೆ ಸನ್ಮಾನ, ಅಶಕ್ತರಿಗೆ ಆರ್ಥಿಕ ನೆರವು

Suddi Udaya

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಮುಂದೂಡಿಕೆ

Suddi Udaya
error: Content is protected !!