July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ರಾಜು ಜೋಸೆಫ್ ಅವರ ಸಾವು ಪ್ರಕರಣ ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರುವುದಾಗಿ ಮಗನಿಂದ ಠಾಣೆಗೆ ದೂರು

ಕಳೆಂಜ: ಇಲ್ಲಿಯ ಕಳೆಂಜ ನಿವಾಸಿ ರಾಜು ಜೋಸೆಫ್ ಅವರು ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರು‌ವುದಾಗಿ ಅವರ ಪುತ್ರ ಟೋನಿ ಪೊಲೀಸರಿಗೆ ದೂರು ನೀಡಿದ್ದಾರೆ.

ಕಳೆಂಜ ಗ್ರಾಮ ನಿವಾಸಿ ಮೃತ ರಾಜು ಜೋಸೆಫ್ ಅವರ ಪುತ್ರ ಟೋನಿ ಎಂಬವರು ನೀಡಿದ ದೂರಿನಂತೆ, ತಂದೆ ರಾಜು ಜೊಸೇಫ್ ರವರು ವಿಪರೀತ ಅಮಲು ಪದಾರ್ಥ ಸೇವಿಸುವ ಚಟವನ್ನು ಹೊಂದಿದ್ದು, ಮನೆಗೆ ಬಾರದೆ ದೂರದ ಊರಿಗೆ ಹೋಗಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡು, ಬಸ್ಸು ನಿಲ್ದಾಣದ ಬಳಿ ಮಲಗುತ್ತಿದ್ದವರು, ಮೂರು ವರ್ಷದ ಹಿಂದೆ ಮನೆಗೆ ಬಂದು ಹೋದವರು ವಾಪಾಸು ಮನೆಗೆ ಬಂದಿರುವುದಿಲ್ಲ. ಮಾ.20 ರಂದು ರಾಜು ಜೊಸೇಫ್ ರವರ ಕಳೆಬರ ಪುದುವೆಟ್ಟು ಗ್ರಾಮದ ಪದವು ಎಂಬಲ್ಲಿರುವ ಅರಣ್ಯ ಪ್ರದೇಶದಲ್ಲಿ ದೊರೆತಿದ್ದು, ಅಲ್ಲೆ ಇದ್ದ ಬ್ಯಾಗ್ ವೊಂದರಲ್ಲಿ ಆಧಾರ್ ಕಾರ್ಡ್ ಕೂಡಾ ದೊರೆತಿರುವುದಾಗಿ ಮಾಹಿತಿ ಬಂದಿರುತ್ತದೆ. ಸ್ಥಳಕ್ಕೆ ಹೋಗಿ ನೋಡಿದಾಗ, ತನ್ನ ತಂದೆಯ ಕಳೆಬರವೆಂದು ಕಂಡುಬಂದಿದ್ದು, ತಂದೆ ಅರಣ್ಯ ಪ್ರದೇಶದಲ್ಲಿ ಮದ್ಯಪಾನ ಮಾಡಿ ಮಲಗಿದ್ದವರು ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರು‌ವಂತೆ ಕಂಡುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್‌ ಕ್ರಮಾಂಕ:25/2024 ಕಲಂ: 174 ಸಿ ಆರ್‌ ಪಿ ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲದಿಂದ 31ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ

Suddi Udaya

ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

Suddi Udaya

ಬೆಳ್ತಂಗಡಿ : ರೆಂಕೆದಗುತ್ತು ನಿವಾಸಿ ಉದಯ ಪೂಜಾರಿ ನಿಧನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಪಟ್ರಮೆ ಸಂಕೇಶದಲ್ಲಿ ವಾಸದ ಮನೆಯ ಹಿಂಬದಿಯಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ತಯಾರಿಕಾ ಅಡ್ಡೆ- ಅಬಕಾರಿ ಇಲಾಖೆಯಿಂದ ದಾಳಿ ಆರೋಪಿ ಪರಾರಿ ಸೊತ್ತುಗಳು ವಶ

Suddi Udaya

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya
error: Content is protected !!