25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

ಮಿತ್ತಬಾಗಿಲು: ಇಲ್ಲಿಯ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಮಾ.21 ರಂದು ವೇದಮೂರ್ತಿ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ವಿವಿಧ ತಾಂತ್ರಿಕ, ವೈದಿಕ ಕಾರ್ಯಕ್ರಮ ನಡೆಯಿತು.

ನಂತರ ನಡೆದ ಧಾರ್ಮಿಕ ಸಭೆಯಲ್ಲಿ ಉಡುಪಿ ಲೇಖಕರು ಹಾಗೂ ಪತ್ರಕರ್ತರು, ಶ್ರೀಕಾಂತ ಶೆಟ್ಟಿ ರವರು ಧಾರ್ಮಿಕ ಉಪನ್ಯಾಸ ನೀಡಿದರು. ಅಧ್ಯಕ್ಷತೆಯನ್ನು ದಂತ ವೈದ್ಯರು ಹಾಗೂ ತುಳು ಶಿವಳ್ಳಿ ಬ್ರಾಹ್ಮಣರ ಸಂಘ ಜಿಲ್ಲಾ ಅಧ್ಯಕ್ಷ ಡಾ| ದಯಾಕರ್ ಎಮ್.ಎಮ್., ವಹಿಸಿದರು.

ಮುಖ್ಯ ಅತಿಥಿಗಳಾಗಿ ಬೆಳಾಲು ಶ್ರೀಕ್ಷೇತ್ರ ಆರಿಕೋಡಿ ಧರ್ಮದರ್ಶಿ ಹರೀಶ ಗೌಡ, ಪುತ್ತೂರು ವಿಶ್ರಾಂತ ಇತಿಹಾಸ ಪ್ರಾಧ್ಯಾಪಕರು ಮತ್ತು ಶಾಸನ ತಜ್ಞರು ಡಾ| ವೈ. ಉಮಾನಾಥ ಶೆಣೈ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ, ಮುಂಡಾಜೆ ನಿವೃತ್ತ ಶಿಕ್ಷಕರು ಗೋಪಾಲಕೃಷ್ಣ ರಾವ್ ಅಡೂರು, ಬೆಳ್ತಂಗಡಿ ರೋಟರಿ ಕ್ಲಬ್‌ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ನಿವೃತ್ತ ಬೆಳ್ತಂಗಡಿ ಸರಕಾರಿ ನೌಕರರ ಸಂಘ ಅಧ್ಯಕ್ಷ ವಿಠಲ ಶೆಟ್ಟಿ, ಮಿತ್ತಬಾಗಿಲು ಮಲವಂತಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷ ಆನಂದ ಗೌಡ ಮೈರ್ನೋಡಿ, ಮಹಾದೇವಿ ಬೈಲುವಾರು ಸಮಿತಿ ಪ್ರಮುಖರು ನಿರಂಜನ ಮಂಟಮೆ, ಮಹಾಲಕ್ಷ್ಮೀ ಬೈಲುವಾರು ಸಮಿತಿ ಪ್ರಮುಖರು ಯಂ. ಚಂದ್ರಶೇಖರ ಗೌಡ ಕುಕ್ಕಾವು, ಮಹಾಗೌರಿ ಬೈಲುವಾರು ಸಮಿತಿ ಪ್ರಮುಖರು ಗಣೇಶ ಕುಂಬಾರ ದುರ್ಗಾನಗರ, ಕಾತ್ಯಾಯಿನಿ ಬೈಲುವಾರು ಸಮಿತಿ ಪ್ರಮುಖರು ಕೆ. ಸುರೇಶ ಪೂಜಾರಿ ಕುಕ್ಕಾವು, ವನದುರ್ಗಾ ಬೈಲುವಾರು ಸಮಿತಿ ಪ್ರಮುಖರು ರಮೇಶ್ ಮಾಂಜ, ಮೂಕಾಂಬಿಕ ಬೈಲುವಾರು ಸಮಿತಿ ಪ್ರಮುಖರು ಕಿರಣ್ ಗೌಡ ಕೋಡಿಯಲ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶ್ರೀ ದೇವಳದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸಿದವರಿಗೆ ಗೋಪಾಲಕೃಷ್ಣ ಭಟ್‌ ಮಂಜಿತ್ತಾಯರು, ಕೊಲ್ಲಿ, ಶಂಕರ ನಾರಾಯಣ ತೋಡ್ತಿಲ್ಲಾಯರು ಕೊಲ್ಲಿ, ಶ್ರೀಧರ ಉಪಾಧ್ಯಾಯರು ಮಾರಿಗುಡಿ ಕಿಲ್ಲೂರು, ವೇದ ವಿದ್ವಾನ್ ಸುನಿಲ್ ಗಣಪತಿ ಹೆಗಡೆ, ಹೊನ್ನಾವರ ಇವರಿಗೆ ಗೌರವಿಸಲಾಯಿತು.

ಈ ಸಂದರ್ಭಲ್ಲಿ ಬ್ರಹ್ಮಕಲಶೋತ್ಸವ ಅಧ್ಯಕ್ಷ ಬಿ.ಕೆ ಧನಂಜಯ ರಾವ್, ಜೀರ್ಣೋದ್ಧಾರ ಸಮಿತಿಯ ಲೋಕೇಶ್ ರಾವ್, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ವಾಸುದೇವ ರಾವ್, ದಾಸಪ್ಪ ಗೌಡ ಪ್ರಧಾನ ಕಾರ್ಯದರ್ಶಿ ಬ್ರಹ್ಮಕಲಶೋತ್ಸವ ಸಮಿತಿ , ಕಾಯಾ೯ಧ್ಯಕ್ಷ ಬಿ.ಕೆ ರಾಜಶೇಖರ ರಾವ್, ಚಪ್ಪರ ಸಮಿತಿಯ ಸಂಚಾಲಕರಾದ ಕೇಶವ ಎಮ್.ಕೆ, ಗೌರವ ಸಲಹೆಗಾರರಾದ ರಾಜು ದಿಡುಪೆ, ಆನಂದ ಆಚಾರ್ಯ, ಹಾಗೂ ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಭಕ್ತರು ಉಪಸ್ಥಿತರಿದ್ದರು.

Related posts

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ತಣ್ಣೀರುಪಂತ: ಅಳಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವೃದ್ಧ ಸಾವು : ಕೊಲೆಯೇ, ಆತ್ಮಹತ್ಯೆಯೇ ಪೊಲೀಸರ ತನಿಖೆ

Suddi Udaya

ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ : ರಾಷ್ಟ್ರೀಯ ರೈತರ ದಿನ ಆಚರಣೆ

Suddi Udaya

ಧರ್ಮಸ್ಥಳ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

Suddi Udaya

ಧರ್ಮಸ್ಥಳದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಉದ್ದಿಮೆದಾರರ ಕಾರ್ಯಗಾರ

Suddi Udaya
error: Content is protected !!