25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾ.22-23: ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ಶಿರ್ಲಾಲು: ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನ ನೆಲ್ಲಿಗುಡ್ಡೆ & ಜಾತ್ರಾ ಸಮಿತಿ ಶಿರ್ಲಾಲು-ಕರಂಬಾರು-ನಲ್ಲಾರು ಗ್ರಾಮಗಳ ಕೂಡುವಿಕೆಯಿಂದ ಮಾ.22 ರಂದು ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನದ ಸನ್ನಿಧಿಯಲ್ಲಿ ಅರ್ಚಕರರಾದ ಸೂರ್‍ಯನಾರಾಯಣ ರಾವ್ ಪೌರೋಹಿತ್ಯದಲ್ಲಿ 22ನೇ ವರ್ಷದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಜರಗಲಿರುವುದು.


ಮಾ.20 ರಂದು ಬೆಳಿಗ್ಗೆ ಜಾತ್ರಾ ಮುಹೂರ್ತ, ಮಾ.22 ರಂದು ಬೆಳಿಗ್ಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಗಣಹೋಮ, ಕಲಶಾಭಿಷೇಕ, ದೈವಗಳಿಗೆ-ಪಂಚಪರ್ವ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಜಯರಾಮ್ ಕರಂಬಾರು ಮ್ಯೂಸಿಕಲಿ ಬಳಗದವರಿಂದ ಎದೆತುಂಬಿ ಹಾಡುವೆನು, ಸಂಗೀತ ರಸಮಂಜರಿ ಮತ್ತು ಕರಂಬಾರು, ಶಿರ್ಲಾಲು ಗ್ರಾಮದ ಶಾಲಾ ಮಕ್ಕಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ಶಿರ್ಲಾಲು ಪುದ್ದರಬೈಲು ದಿ| ಬೂಬ ಇವರ ಮನೆಯಿಂದ ಕಾನದ-ಕಟದ ಹಾಗೂ ಪರಿವಾರ ದೈವಗಳ ಭಂಡಾರ ಹೊರಡುವುದು. ರಾತ್ರಿ ಸಭಾ ಕಾರ್ಯಕ್ರಮ, ಕಾನದ-ಕಟದರ ದರ್ಶನ ಸೇವೆ, ಶ್ರೀ ಚಾಮುಂಡಿ, ಗುಳಿಗ ಗಗ್ಗರ ಸೇವೆ, ರಾತ್ರಿ 12 ಗಂಟೆಗೆ ಲಕ್ಕಿಡಿಪ್ ಡ್ರಾ ನಡೆಯಲಿದೆ.

ಮಾ.23ರಂದು ಬೆಳಿಗ್ಗೆ ಅಲೇರಾ ಪಂಜುರ್ಲಿ ಗಗ್ಗರ ಸೇವೆ, ರಾತ್ರಿ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿರ್ಲಾಲು ನೆಲ್ಲಿಗುಡ್ಡೆ ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಜಾತ್ರಾ ಸಮಿತಿ ಅಧ್ಯಕ್ಷ ರವಿ ಕುಂಟಲಕಜೆ ವಹಿಸಲಿದ್ದಾರೆ. ಮೂಡಬಿದ್ರೆ ಆಳ್ವಾಸ್ ಕಾಲೇಜು ಪ್ರಾಧ್ಯಾಪಕ ಡಾ| ಯೋಗೀಶ್ ಕೈರೋಡಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಬಾಬು ಎ. ತಿಳಿಸಿದ್ದಾರೆ.

Related posts

ಸೌಜನ್ಯ ಪ್ರಕರಣ ಮರು ತನಿಖೆ ಕೋರಿದ ಅರ್ಜಿ: ಸರಕಾರ, ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ

Suddi Udaya

ಉರುವಾಲು ಭಾರತೀ ವಿದ್ಯಾಸಂಸ್ಥೆಯಲ್ಲಿ ವಿಜೃಂಭಣೆಯ ಗಣರಾಜ್ಯೋತ್ಸವ: ಶಾಲಾ ವಿದ್ಯಾರ್ಥಿಗಳಿಂದ ಹೆತ್ತವರಿಗಾಗಿ ಮಾತಾ ಪಿತೃ ಪೂಜೆ

Suddi Udaya

ಚಿನ್ನಾಭರಣ ಪರೀಕ್ಷಕನ ವಜಾ ಪ್ರಕರಣ; ಪ್ರಕರಣದ ನಿಗೂಢತೆಯ ಬಯಲಿಗೆ ಆಗ್ರಹ; ಮಾ.18ರಂದು ಕೊಕ್ಕಡದಲ್ಲಿ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಮನ್ಸೂನ್ ಸ್ಪೆಷಲ್ ಆಫರ್

Suddi Udaya
error: Content is protected !!