September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು: ಅಕ್ರಮವಾಗಿ ಮದ್ಯ ಮಾರಾಟ: ಬೆಳ್ತಂಗಡಿ ಪೊಲೀಸರಿಂದ ದಾಳಿ

ಕೊಯ್ಯೂರು : ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ ಘಟನೆ ಕೊಯ್ಯೂರು ಗ್ರಾಮದ ನೆಕ್ಕಿಲು ಎಂಬಲ್ಲಿ ಮಾ.21 ರಂದು ನಡೆದಿದೆ.

ಕೊಯ್ಯೂರು ಗ್ರಾಮದ ನೆಕ್ಕಿಲ್‌ ಬೆಳಾಲು ಅನಂತೋಡಿ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಹೋಗುವ ಮಣ್ಣು ರಸ್ತೆಯ ಬದಿ, ಸಾರ್ವಜನಿಕ ಸ್ಥಳದಲ್ಲಿ, ಬೇರೆ ಬೇರೆ ವೈನ್ ಶಾಪ್ ಗಳಿಂದ ವಿಸ್ಕಿ ಸ್ಯಾಚೆಟ್ ಗಳನ್ನು ಖರೀದಿಸಿ ಹೆಚ್ಚು ಹಣಕ್ಕೆ ಮಾರಾಟಕ್ಕೆ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟುಕೊಂಡಿದ್ದ, ಕೊಯ್ಯೂರು ನಿವಾಸಿ ವಸಂತ (42) ಎಂಬಾತನನ್ನು‌ ವಶಕ್ಕೆ ಪಡೆದ, ಬೆಳ್ತಂಗಡಿ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕರಾದ ಮುರುಳೀಧರ ನಾಯ್ಕರವರು ಹಾಗೂ ಸಿಬ್ಬಂದಿಗಳು, ಆತನ ಬಳಿಯಿದ್ದ 90 ಎಂ.ಎಲ್. ಪರಿಮಾಣದ ಒಟ್ಟು 53 ಸ್ಯಾಚೆಟ್‌ ಗಳನ್ನು (ಒಟ್ಟು ಮೌಲ್ಯ ರೂ 2125/- ) ಹಾಗೂ ಮದ್ಯ ಮಾರಾಟದಿಂದ ಸಂಗ್ರಹಿಸಿದ ಒಟ್ಟು ರೂ 230/- ರೂ ನಗದು ಹಣವನ್ನು ಸ್ವಾಧಿನಪಡಿಸಿಕೊಂಡು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರ 37/2024 ಕಲಂ: 32.34 ಕೆ ಇ ಆಕ್ಟ್‌ -1965 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕೊಕ್ಕಡದ‌ಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರರವರ ಕಾರನ್ನು ಚುನಾವಣಾ ಅಧಿಕಾರಿಗಳಿಂದ ತಪಾಸಣೆ

Suddi Udaya

ಇಂದಿನಿಂದ ಬೆಳ್ತಂಗಡಿಯಲ್ಲಿ ಭಾರಿ ರಿಯಾಯಿತಿಯಲ್ಲಿ ಬಟ್ಟೆಗಳ ಮಾರಾಟ

Suddi Udaya

ಡಿ. 29 ರಂದು ನಡೆಯಲಿರುವ ಬಳ್ಳಮಂಜ ಶೇಷ ನಾಗ ಜೋಡು ಕರೆ ಕಂಬಳದ ಪೂರ್ವ ಸಿದ್ಧತಾ ಸಭೆ

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

Suddi Udaya

ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿಗೆ ಆಯ್ಕೆ

Suddi Udaya
error: Content is protected !!