25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ: ಅಕ್ರಮ ವೈನ್ ದಾಸ್ತಾನು ಸ್ಟೋರ್ ಮೇಲೆ ಬೆಳ್ತಂಗಡಿ ಅಬಕಾರಿ ದಾಳಿ ರೂ.2 ಲಕ್ಷ ಮೌಲ್ಯದ ವೈನ್ ವಶ

ಬೆಳ್ತಂಗಡಿ : ನಿಷೇಧಿತ ಹೋಮ್ ಮೇಡ್ ವೈನ್ ಮಾರಾಟ ಮಾಡುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಅಬಕಾರಿ ದಳದದವರು ದಾಳಿ ನಡೆಸಿದ್ದಾರೆ. ನಿಡ್ಲೆ ಗ್ರಾಮದ ಜಿತೇಂದ್ರ ಎಂಬವರ ಸ್ಟೋರ್ ನಲ್ಲಿ ಹೋಮ್ ಮೇಡ್ ವೈನ್ ವೈನ್ ನನ್ನು ಹೊರ ಜಿಲ್ಲೆಯಿಂದ ಖರೀದಿಸಿ ದಾಸ್ತಾನು ಮಾಡಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬೆಳ್ತಂಗಡಿ ಅಬಕಾರಿ ದಳದ ಇನ್ಸ್ಪೆಕ್ಟರ್ ಲಕ್ಷ್ಮಣ್ ಉಪ್ಪಾರ್ ಮತ್ತು ತಂಡ ಮಾ.20 ರಂದು ಸಂಜೆ 4 ಗಂಟೆಗೆ ದಾಳಿ ಮಾಡಿದ್ದಾರೆ.

ದಾಳಿ ವೇಳೆ ಮಾರಾಟ ಮಾಡಲು ದಾಸ್ತಾನು ಮಾಡಿದ್ದ ಹೋಮ್ ಮೇಡ್ ವೈನ್ 306 ಲೀಟರ್ ವಶಪಡಿಸಿಕೊಂಡಿದ್ದು. ಇದರ ಮೌಲ್ಯ ಸುಮಾರು 2,01,960 ಲಕ್ಷ ರೂಪಾಯಿ ಅಗಿದ್ದು.‌ಆರೋಪಿಯನ್ನು ವಶಕ್ಕೆ ಪಡೆದು ಆತನ ವಿರುದ್ಧ ಬೆಳ್ತಂಗಡಿ ಅಬಕಾರಿ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ ಅಬಕಾರಿ ದಳದ ಇನ್ಸ್ಪೆಕ್ಟರ್ ಲಕ್ಷಣ್ ಉಪ್ಪಾರ್, ಹೆಡ್ ಕಾನ್ಸ್‌ಟೇಬಲ್ ಬೋಜ ಕೆ, ವಿನಯ್ , ಶಿವಶಂಕರಪ್ಪ ಮತ್ತು ವಾಹನ ಚಾಲಕ ನವೀನ್ ಭಾಗವಹಿಸಿದರು.

Related posts

ಬೂಡುಜಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ. 10 ಡಿವಿಡೆಂಟ್

Suddi Udaya

ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ಇಎಫ್) 2024-25″ – ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಗೆ ಚಿನ್ನದ ಪದಕ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ.

Suddi Udaya

ಬೆಳ್ತಂಗಡಿ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ 33 ನೇ ಸಹಾಯಧನ ಹಸ್ತಾಂತರ

Suddi Udaya

ಸುನ್ನೀ ಕೋರ್ಡಿನೇಷನ್ ಸಮಿತಿಯಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ

Suddi Udaya

ಪಶ್ಚಿಮ ಬಂಗಾಳದ ಚಾರಿತ್ರಿಕ ಗೆಲುವು ಬಿಜೆಪಿಯ ಸೈದಾಂತಿಕ ನಿಲುವು ಮತ್ತು ಪ್ರಧಾನಿ ಮೋದಿಯವರ ‘ವಿಕಸಿತ ಭಾರತ’ದ ಸಂಕಲ್ಪಕ್ಕೆ ಸಂದ ಜಯ: ಸಂಸದ ಕ್ಯಾ. ಚೌಟ

Suddi Udaya

ಉಜಿರೆ: ಶ್ರೀ ಧರ್ಮಸ್ಥಳದ ಮಂಜುನಾಥೇಶ್ವರ ಆಸ್ಪತ್ರೆಗೆ ದಶಮಾನೋತ್ಸವ ಸಂಭ್ರಮ

Suddi Udaya
error: Content is protected !!