July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪುದುವೆಟ್ಟು: ಡಿಸೇಲ್ ಪೈಪ್ ಲೈನ್ ಕೊರೆದು ರೂ. 9 ಲಕ್ಷ ಮೌಲ್ಯದ ಡಿಸೇಲ್ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: : ಡಿಸೇಲ್ ಪೈಪ್ ಲೈನ್ ಕೊರೆದು 9 ಲಕ್ಷ ರೂ ಮೌಲ್ಯದ ಡಿಸೇಲ್ ಕಳ್ಳತನ ಮಾಡಿದ ಘಟನೆ ಪುದುವೆಟ್ಟು ಗ್ರಾಮದ ಆಲಡ್ಕದಲ್ಲಿ ನಡೆದಿದೆ.

ಮಂಗಳೂರು, ಹಾಸನ ಮತ್ತು ಬೆಂಗಳೂರಿಗೆ ಪೆಟ್ರೋನೆಟ್ ಪೈಪ್ ಮೂಲಕ ಡಿಸೇಲ್ ಸರಬರಾಜು ಆಗುತ್ತಿದ್ದು ಮಾ.16ರ ರಾತ್ರಿಯಿಂದ ಮಾ.19ರ ರಾತ್ರಿಯ ಮಧ್ಯದ ಅವಧಿಯಲ್ಲಿ ಯಾರೋ ಕಳ್ಳರು ಡಿಸೇಲ್ ಪೈಪ್ ಲೈನ್ ನಲ್ಲಿ ರಂದ್ರ ಕೊರೆದು 2.5 ಇಂಚು ಹೆಚ್ ಡಿಪಿಇ ಪೈಪ್ ಮೂಲಕ ಅಂದಾಜು 12,000 ಲೀ. ಡಿಸೇಲ್ ನ್ನು ಕಳವು ಮಾಡಿದ್ದಾರೆ. ಕಳವಾದ ಡಿಸೇಲ್ ನ ಮೌಲ್ಯ ರೂ 9,60,000 ಎಂದು ಪರಿಗಣಿಸಲಾಗಿದೆ.

ಘಟನೆಯ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 19/2024 ಕಲಂ: 427,285, 379 ಐ ಪಿ ಸಿ ಕಲಂ 15(2) ಪೆಟ್ರೋನೆಟ್ ಕಾಯ್ದೆ ಕಲಂ 3(2) ಪ್ರಿವೆನ್ಸೆನ್ ಆಫ್ ಡ್ಯಾಮೆಜ್ ಟು ಪಬ್ಲಿಕ್ ಪ್ರಾಪರ್ಟಿ ಕಾಯ್ದೆ ಯಂತೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

Related posts

ಲಯನ್ಸ್ ಕುಟುಂಬ ಮಿಲನ ಸಂಭ್ರಮದ ಹೊನಲು

Suddi Udaya

ಭಾರತೀಯ ಜನತಾ ಪಾರ್ಟಿಯ ಮೂವರು ಪಕ್ಷದ ಸದಸ್ಯತ್ವದಿಂದ ಅಮಾನತು: ನೆರಿಯ ಗ್ರಾ.ಪಂ ಅಧ್ಯಕ್ಷೆ ಸೇರಿ ಇಬ್ಬರು ಸದಸ್ಯರಿಗೆ ಗೆಟ್ ಪಾಸ್ ನೀಡಿದ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರು

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಈದ್ ಸೌಹಾರ್ದ ಸಂದೇಶ ಕಾರ್ಯಕ್ರಮ: ಭಾರತ ಸೌಹಾರ್ದತೆಯ ಸುಂದರ ಹೂದೋಟ- ಝಮೀರ್ ಸ‌ಅದಿ

Suddi Udaya

ಯೂಟ್ಯೂಬರ್ ಸಮೀರ್ ಎಮ್.ಡಿ ಎರಡು ಮನೆಗೆ ಪೊಲೀಸ್ ಎಂಟ್ರಿ

Suddi Udaya

ಉಜಿರೆ: ಮಳೆಯಿಂದ ಹಾನಿಯಾದ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!