July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲಿನಲ್ಲಿ ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ: ಆರೋಪಿ ದಯಾನಂದ ಸಹಿತ ರೂ.45 ಸಾವಿರ ಮೌಲ್ಯದ ಮದ್ಯ ವಶಕ್ಕೆ

ಬೆಳ್ತಂಗಡಿ : ಅಕ್ರಮವಾಗಿ ಗೋಡೌನ್ ನಲ್ಲಿ ಮದ್ಯವನ್ನು ದಾಸ್ತಾನು ಮಾಡಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಂಗಳೂರು ಅಬಕಾರಿ ಡಿಸಿ ವಿಶೇಷ ಪತ್ತೆ ದಳ ಸಿಬ್ಬಂದಿಗಳು ದಾಳಿ ಮಾಡಿ ಮದ್ಯ ಹಾಗೂ ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ಮಾ.21ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಿನಂದೆಲ್ ಬಾನಿ ಮೆನ್ಸ್ ಪಾರ್ಲರ್ ನ ಹಿಂಭಾಗದ ಗೋಡೌನ್ ನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಬಾರ್ ಅಥವಾ ವೈನ್ ಶಾಪ್‌ ನಿಂದ ಖರೀದಿಸಿ ಅಕ್ರಮವಾಗಿ ಮದ್ಯ ಶೇಖರಿಸಿಟ್ಟದ್ದ ಬಗ್ಗೆ ಮಂಗಳೂರು ಅಬಕಾರಿ ಡಿಸಿ ವಿಶೇಷ ಪತ್ತೆ ದಳಕ್ಕೆ ಬಂದ ಖಚಿತ ಮಾಹಿತಿ ಮೇರೆಗೆ ಮಾ. 21 ರಂದು ಸಂಜೆ 6 ಗಂಟೆಗೆ ದಾಳಿ ಮಾಡಿದ್ದಾರೆ.

ವಶಪಡಿಸಿಕೊಂಡ ಅಕ್ರಮ ಮದ್ಯ 67.950 ಲೀಟರ್ ಮತ್ತು ಬಿಯರ್ 68.680 ಲೀಟರ್ ವಶಕ್ಕೆ ಪಡೆದುಕೊಂಡಿದ್ದು ಇದರ ಮೌಲ್ಯ ಸುಮಾರು 45,000 ರೂಪಾಯಿ ಅಗಿದೆ. ಆರೋಪಿ ಬೆಳ್ತಂಗಡಿ ತಾಲೂಕು ಬೆಳಾಲು ಗ್ರಾಮದ ಮಿನಂದೆಲ್ ನಿವಾಸಿ ಶೀನಾ ಗೌಡರ ಮಗ ದಯಾನಂದ ಗೌಡ (47) ಎಂಬಾತನನ್ನು ಬಂಧಿಸಲಾಗಿದೆ‌.ಬೆಳ್ತಂಗಡಿ ಅಬಕಾರಿ ದಳ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಯಾಚರಣೆಯಲ್ಲಿ ಮಂಗಳೂರು ಅಬಕಾರಿ ಡಿಸಿ ವಿಶೇಷ ಪತ್ತೆ ದಳದ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿಗಳು ಭಾಗವಹಿಸಿದರು‌

Related posts

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ನಡೆದ 19ನೇ ವರ್ಷದ ಮೊಸರು ಕುಡಿಕೆ ಉತ್ಸವ: ಶ್ರೀ ಕೃಷ್ಣ ಅತ್ಯಂತ ಶ್ರೇಷ್ಠ ಮನಶಾಸ್ತ್ರಜ್ಞ: ಪ್ರತಾಪ್ ಸಿಂಹ ನಾಯಕ್

Suddi Udaya

ಮಂಗಳೂರು ವಿ. ವಿ. ಅಂತರ್ ಕಾಲೇಜು ಪುರುಷರ ಕ್ರಿಕೆಟ್: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಸತತ ಮೂರನೇ ಬಾರಿಗೆ ಚಾಂಪಿಯನ್

Suddi Udaya

ಧರ್ಮಸ್ಥಳ ಸಾಧನಾ ಸಭಾಭವನದಲ್ಲಿ ಶೇ 50 ರಿಯಾಯಿತಿ ದರದಲ್ಲಿ ಬಟ್ಟೆಗಳ ಬೃಹತ್ ಮಾರಾಟ ಮೇಳ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ಮತ್ತು ಮೆನ್ಸ್ ಪಾರ್ಲರ್ ಮೆನೇಜ್‌ಮೆಂಟ್ ತರಬೇತಿಗಳ ಸಮಾರೋಪ ಸಮಾರಂಭ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ ; ಧಾರ್ಮಿಕ ಸಭೆ

Suddi Udaya

ಕೊಕ್ಕಡ: ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿ: ಸೂಕ್ತ ಭದ್ರತೆ ಒದಗಿಸಲು ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಳಂಬಿಲ ಅಗ್ರಹ

Suddi Udaya
error: Content is protected !!