July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ದೇವರ ದಶ೯ನ ಬಲಿ ಉತ್ಸವ

ನಡ: ನಾಡಿನ ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಶ್ರೀ ಸದಾಶಿವ ರುದ್ರ ದೇವಸ್ಥಾನ ಸುರ್ಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ವರ್ಷಾವಧಿ ಜಾತ್ರ ಮಹೋತ್ಸವ ಮಾ.18ರಿಂದ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಗಳೊಂದಿಗೆ ಆರಂಭಗೊಂಡಿದ್ದು, ಮಾ.22ರಂದು ಬೆಳಗ್ಗೆ ದೇವರ ದರ್ಶನ ಬಲಿ ಉತ್ಸವ, ಮಹಾಪೂಜೆ ನಡೆಯಿತು.

ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರ ಡಾ| ಸತೀಶ್ಚಂದ್ರ ಸುರ್ಯಗುತ್ತು, ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ, ಧನಂಜಯ ಅಜ್ರಿ ನಡಗುತ್ತು, ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ.ರಾಜಶೇಖರ ಅಜ್ರಿ, ಬಿ. ಮುನಿರಾಜ ಅಜ್ರಿ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮಾ.18ರಂದು ದೇವರ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಗಣಪತಿ ಹೋಮ, ಕಲಶ ಪೂಜೆ, ಕಲಶಾಭಿಷೇಕ ಮಹಾಪೂಜೆ ರಾತ್ರಿ ರಂಗಪೂಜೆ ದೇವರ ಉತ್ಸವ ನಡೆಯಿತು. ಮಾ.19 ರಂದು ಗಣಪತಿ ಹೋಮ, ನವಕ ಪ್ರಧಾನ ಕಲಶಾಭಿಷೇಕ, ಧ್ವಜಾರೋಹಣ, ನಿತ್ಯಬಲಿ ಮೊದಲಾದ ಕಾರ್ಯಕ್ರಮಗಳು ಜರುಗಿತು. ಮಾ.20ರಂದು ಮಹಾಪೂಜೆ, ನಿತ್ಯಬಲಿ, ಸಂಜೆ ಸುರ್ಯಗುತ್ತು ಮನೆಯಿಂದ ದೈವಗಳ ಭಂಡಾರ ತರಲಾಯಿತು. ನಂತರ ಉತ್ಸವ ಹೊರಟು ವಸಂತಕಟ್ಟೆ ಪೂಜೆ ಜರುಗಿತು. ಮಾ.21ರಂದು ಸೊಡಬಲಿ ಉತ್ಸವ ಬಳಿಕ ಮಹಾಪೂಜೆ ಜರುಗಿತು.
ರಾತ್ರಿ ಉತ್ಸವ ಹೊರಟು ನೃತ್ಯ ಉತ್ಸವ, ರಥಕಟ್ಟೆ ಪೂಜೆ, ಮಹಾಪೂಜೆ, ಶಯನೋತ್ಸವ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.

Related posts

ತಾಲೂಕು ಮಟ್ಟದ ಸ್ಪರ್ಧೆ: ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

Suddi Udaya

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ- ನಿಟ್ಟಡೆ ವತಿಯಿಂದ ಗುರುನಮನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

Suddi Udaya

ಶಾಂತಿವನದಲ್ಲಿ 8ನೇ ರಾಷ್ಟ್ರೀಯ ನಿಸರ್ಗೋಪಚಾರ ದಿನಾಚರಣೆ

Suddi Udaya

ಬೆಳಾಲು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya
error: Content is protected !!