July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು: ಅಕ್ರಮವಾಗಿ ಮದ್ಯ ಮಾರಾಟ: ಬೆಳ್ತಂಗಡಿ ಪೊಲೀಸರಿಂದ ದಾಳಿ

ಕೊಯ್ಯೂರು : ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ ಘಟನೆ ಕೊಯ್ಯೂರು ಗ್ರಾಮದ ನೆಕ್ಕಿಲು ಎಂಬಲ್ಲಿ ಮಾ.21 ರಂದು ನಡೆದಿದೆ.

ಕೊಯ್ಯೂರು ಗ್ರಾಮದ ನೆಕ್ಕಿಲ್‌ ಬೆಳಾಲು ಅನಂತೋಡಿ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಹೋಗುವ ಮಣ್ಣು ರಸ್ತೆಯ ಬದಿ, ಸಾರ್ವಜನಿಕ ಸ್ಥಳದಲ್ಲಿ, ಬೇರೆ ಬೇರೆ ವೈನ್ ಶಾಪ್ ಗಳಿಂದ ವಿಸ್ಕಿ ಸ್ಯಾಚೆಟ್ ಗಳನ್ನು ಖರೀದಿಸಿ ಹೆಚ್ಚು ಹಣಕ್ಕೆ ಮಾರಾಟಕ್ಕೆ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟುಕೊಂಡಿದ್ದ, ಕೊಯ್ಯೂರು ನಿವಾಸಿ ವಸಂತ (42) ಎಂಬಾತನನ್ನು‌ ವಶಕ್ಕೆ ಪಡೆದ, ಬೆಳ್ತಂಗಡಿ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕರಾದ ಮುರುಳೀಧರ ನಾಯ್ಕರವರು ಹಾಗೂ ಸಿಬ್ಬಂದಿಗಳು, ಆತನ ಬಳಿಯಿದ್ದ 90 ಎಂ.ಎಲ್. ಪರಿಮಾಣದ ಒಟ್ಟು 53 ಸ್ಯಾಚೆಟ್‌ ಗಳನ್ನು (ಒಟ್ಟು ಮೌಲ್ಯ ರೂ 2125/- ) ಹಾಗೂ ಮದ್ಯ ಮಾರಾಟದಿಂದ ಸಂಗ್ರಹಿಸಿದ ಒಟ್ಟು ರೂ 230/- ರೂ ನಗದು ಹಣವನ್ನು ಸ್ವಾಧಿನಪಡಿಸಿಕೊಂಡು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರ 37/2024 ಕಲಂ: 32.34 ಕೆ ಇ ಆಕ್ಟ್‌ -1965 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮಧ್ಯಾಂತರ ಸಮ್ಮೇಳನದಲ್ಲಿ ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ‘ಎಕ್ಸೆಲೆನ್ಸ್ ಅವಾರ್ಡ್’ ಹಾಗೂ ‘ಗೋಲ್ಡನ್ ಸ್ಟಾರ್ ಪ್ರೆಸಿಡೆಂಟ್’ ಪ್ರಶಸ್ತಿ

Suddi Udaya

ಧರ್ಮಸ್ಥಳ : ಚರಂಡಿಗೆ ಉರುಳಿ ಬಿದ್ದ ವಾಹನಗಳು

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ಹೈಕೋರ್ಟ್ ರಿಜಿಸ್ಟ್ರಾರ್ ರಾಧಾ ರವರ ಭೇಟಿ; ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆಯ ರೂಪುರೇಷೆಗಳ ಬಗ್ಗೆ ಚರ್ಚೆ

Suddi Udaya

ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ಜನಮಂಗಲ ಸಲಕರಣೆ ವಿತರಣೆ

Suddi Udaya
error: Content is protected !!