23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು: ಅಕ್ರಮವಾಗಿ ಮದ್ಯ ಮಾರಾಟ: ಬೆಳ್ತಂಗಡಿ ಪೊಲೀಸರಿಂದ ದಾಳಿ

ಕೊಯ್ಯೂರು : ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ ಘಟನೆ ಕೊಯ್ಯೂರು ಗ್ರಾಮದ ನೆಕ್ಕಿಲು ಎಂಬಲ್ಲಿ ಮಾ.21 ರಂದು ನಡೆದಿದೆ.

ಕೊಯ್ಯೂರು ಗ್ರಾಮದ ನೆಕ್ಕಿಲ್‌ ಬೆಳಾಲು ಅನಂತೋಡಿ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಹೋಗುವ ಮಣ್ಣು ರಸ್ತೆಯ ಬದಿ, ಸಾರ್ವಜನಿಕ ಸ್ಥಳದಲ್ಲಿ, ಬೇರೆ ಬೇರೆ ವೈನ್ ಶಾಪ್ ಗಳಿಂದ ವಿಸ್ಕಿ ಸ್ಯಾಚೆಟ್ ಗಳನ್ನು ಖರೀದಿಸಿ ಹೆಚ್ಚು ಹಣಕ್ಕೆ ಮಾರಾಟಕ್ಕೆ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟುಕೊಂಡಿದ್ದ, ಕೊಯ್ಯೂರು ನಿವಾಸಿ ವಸಂತ (42) ಎಂಬಾತನನ್ನು‌ ವಶಕ್ಕೆ ಪಡೆದ, ಬೆಳ್ತಂಗಡಿ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕರಾದ ಮುರುಳೀಧರ ನಾಯ್ಕರವರು ಹಾಗೂ ಸಿಬ್ಬಂದಿಗಳು, ಆತನ ಬಳಿಯಿದ್ದ 90 ಎಂ.ಎಲ್. ಪರಿಮಾಣದ ಒಟ್ಟು 53 ಸ್ಯಾಚೆಟ್‌ ಗಳನ್ನು (ಒಟ್ಟು ಮೌಲ್ಯ ರೂ 2125/- ) ಹಾಗೂ ಮದ್ಯ ಮಾರಾಟದಿಂದ ಸಂಗ್ರಹಿಸಿದ ಒಟ್ಟು ರೂ 230/- ರೂ ನಗದು ಹಣವನ್ನು ಸ್ವಾಧಿನಪಡಿಸಿಕೊಂಡು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರ 37/2024 ಕಲಂ: 32.34 ಕೆ ಇ ಆಕ್ಟ್‌ -1965 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ ಹಿಂದೂ ಸಂಗಮ ಆಯೋಜನಾ ಸಮಿತಿಯಿಂದ ಪ್ರಶಿಕ್ಷಣ ವರ್ಗ ಮತ್ತು ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ

Suddi Udaya

ಬಂದಾರು, ಮೊಗ್ರು ಗ್ರಾಮಗಳಲ್ಲಿ ತೀವ್ರ ನೆಟ್‌ವರ್ಕ್ ಸಮಸ್ಯೆ: ಗ್ರಾಹಕರ ಆಕ್ರೋಶ ಉದ್ಯೋಗಿಗಳು, ವಿದ್ಯಾರ್ಥಿಗಳ ಪರದಾಟ

Suddi Udaya

ಬಳoಜ -ತೆಂಕಕಾರಂದೂರು- ನಾಲ್ಕೂರು ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಉಜಿರೆ ಟಿಬಿ ಕ್ರಾಸ್ ಬಳಿ ಸ್ಮಾರ್ಟ್ ಎಂಟರ್ಪ್ರೈಸಸ್ ಶುಭಾರಂಭ

Suddi Udaya

ಬೆಂಗಳೂರು ಸೆಮಿಕಂಡಕ್ಟರ್ ವಿನ್ಯಾಸ ಸಂಸ್ಥೆ: 280 ಕೋಟಿ ರೂ. ಗೆ ಇನ್ಫೋಸಿಸ್ ಸ್ವಾಧೀನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya
error: Content is protected !!