September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು: ಅಕ್ರಮವಾಗಿ ಮದ್ಯ ಮಾರಾಟ: ಬೆಳ್ತಂಗಡಿ ಪೊಲೀಸರಿಂದ ದಾಳಿ

ಕೊಯ್ಯೂರು : ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ ಘಟನೆ ಕೊಯ್ಯೂರು ಗ್ರಾಮದ ನೆಕ್ಕಿಲು ಎಂಬಲ್ಲಿ ಮಾ.21 ರಂದು ನಡೆದಿದೆ.

ಕೊಯ್ಯೂರು ಗ್ರಾಮದ ನೆಕ್ಕಿಲ್‌ ಬೆಳಾಲು ಅನಂತೋಡಿ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಹೋಗುವ ಮಣ್ಣು ರಸ್ತೆಯ ಬದಿ, ಸಾರ್ವಜನಿಕ ಸ್ಥಳದಲ್ಲಿ, ಬೇರೆ ಬೇರೆ ವೈನ್ ಶಾಪ್ ಗಳಿಂದ ವಿಸ್ಕಿ ಸ್ಯಾಚೆಟ್ ಗಳನ್ನು ಖರೀದಿಸಿ ಹೆಚ್ಚು ಹಣಕ್ಕೆ ಮಾರಾಟಕ್ಕೆ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟುಕೊಂಡಿದ್ದ, ಕೊಯ್ಯೂರು ನಿವಾಸಿ ವಸಂತ (42) ಎಂಬಾತನನ್ನು‌ ವಶಕ್ಕೆ ಪಡೆದ, ಬೆಳ್ತಂಗಡಿ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕರಾದ ಮುರುಳೀಧರ ನಾಯ್ಕರವರು ಹಾಗೂ ಸಿಬ್ಬಂದಿಗಳು, ಆತನ ಬಳಿಯಿದ್ದ 90 ಎಂ.ಎಲ್. ಪರಿಮಾಣದ ಒಟ್ಟು 53 ಸ್ಯಾಚೆಟ್‌ ಗಳನ್ನು (ಒಟ್ಟು ಮೌಲ್ಯ ರೂ 2125/- ) ಹಾಗೂ ಮದ್ಯ ಮಾರಾಟದಿಂದ ಸಂಗ್ರಹಿಸಿದ ಒಟ್ಟು ರೂ 230/- ರೂ ನಗದು ಹಣವನ್ನು ಸ್ವಾಧಿನಪಡಿಸಿಕೊಂಡು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರ 37/2024 ಕಲಂ: 32.34 ಕೆ ಇ ಆಕ್ಟ್‌ -1965 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ನಡ ಸ.ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಪ್ರೋ| ಎ. ಕೃಷ್ಣಪ್ಪ ಪೂಜಾರಿಯವರಿಗೆ ಪೇಜಾವರ ಶ್ರೀ ವಿಶ್ವೇಶತೀರ್ಥ “ಜೀವಮಾನ ಸಾಧನಾ ಪ್ರಶಸ್ತಿ”

Suddi Udaya

ಅರಸಿನಮಕ್ಕಿ ಹೊಸ್ತೋಟ ಶಾಲಾ ಬಳಿ ಮರ ಬಿದ್ದು ರಸ್ತೆ ತಡೆ : ಅರಸಿನಮಕ್ಕಿ ನವಶಕ್ತಿಯ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ತೆರವು

Suddi Udaya

ಮಚ್ಚಿನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಪರಿಸರ ದಿನಾಚರಣೆ

Suddi Udaya

ಮೇ 26: ಯೂತ್ ಮತ್ತು ಸಾಮಾಜಿಕ ಕಾಳಜಿಗಳ ಕುರಿತು ರಾಷ್ಟ್ರೀಯ ಸಮ್ಮೇಳನ “ಸಂಭ್ರಮ-2023”

Suddi Udaya
error: Content is protected !!