July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ: ಅಕ್ರಮ ವೈನ್ ದಾಸ್ತಾನು ಸ್ಟೋರ್ ಮೇಲೆ ಬೆಳ್ತಂಗಡಿ ಅಬಕಾರಿ ದಾಳಿ ರೂ.2 ಲಕ್ಷ ಮೌಲ್ಯದ ವೈನ್ ವಶ

ಬೆಳ್ತಂಗಡಿ : ನಿಷೇಧಿತ ಹೋಮ್ ಮೇಡ್ ವೈನ್ ಮಾರಾಟ ಮಾಡುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಅಬಕಾರಿ ದಳದದವರು ದಾಳಿ ನಡೆಸಿದ್ದಾರೆ. ನಿಡ್ಲೆ ಗ್ರಾಮದ ಜಿತೇಂದ್ರ ಎಂಬವರ ಸ್ಟೋರ್ ನಲ್ಲಿ ಹೋಮ್ ಮೇಡ್ ವೈನ್ ವೈನ್ ನನ್ನು ಹೊರ ಜಿಲ್ಲೆಯಿಂದ ಖರೀದಿಸಿ ದಾಸ್ತಾನು ಮಾಡಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬೆಳ್ತಂಗಡಿ ಅಬಕಾರಿ ದಳದ ಇನ್ಸ್ಪೆಕ್ಟರ್ ಲಕ್ಷ್ಮಣ್ ಉಪ್ಪಾರ್ ಮತ್ತು ತಂಡ ಮಾ.20 ರಂದು ಸಂಜೆ 4 ಗಂಟೆಗೆ ದಾಳಿ ಮಾಡಿದ್ದಾರೆ.

ದಾಳಿ ವೇಳೆ ಮಾರಾಟ ಮಾಡಲು ದಾಸ್ತಾನು ಮಾಡಿದ್ದ ಹೋಮ್ ಮೇಡ್ ವೈನ್ 306 ಲೀಟರ್ ವಶಪಡಿಸಿಕೊಂಡಿದ್ದು. ಇದರ ಮೌಲ್ಯ ಸುಮಾರು 2,01,960 ಲಕ್ಷ ರೂಪಾಯಿ ಅಗಿದ್ದು.‌ಆರೋಪಿಯನ್ನು ವಶಕ್ಕೆ ಪಡೆದು ಆತನ ವಿರುದ್ಧ ಬೆಳ್ತಂಗಡಿ ಅಬಕಾರಿ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ ಅಬಕಾರಿ ದಳದ ಇನ್ಸ್ಪೆಕ್ಟರ್ ಲಕ್ಷಣ್ ಉಪ್ಪಾರ್, ಹೆಡ್ ಕಾನ್ಸ್‌ಟೇಬಲ್ ಬೋಜ ಕೆ, ವಿನಯ್ , ಶಿವಶಂಕರಪ್ಪ ಮತ್ತು ವಾಹನ ಚಾಲಕ ನವೀನ್ ಭಾಗವಹಿಸಿದರು.

Related posts

ಅ.10: ಧರ್ಮಸ್ಥಳ ಕಲ್ಲೇರಿಯಲ್ಲಿ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ- ಶೇ 20 ಡಿವಿಡೆಂಡ್ ಹಾಗೂ ತಾಲೂಕಿನ ಎಲ್ಲಾ ಸರಕಾರಿ ಆಸ್ಪತ್ರೆಗಳ ಡಿ ವರ್ಗದ ಹೊರ ಗುತ್ತಿಗೆ ನೌಕರರಿಗೆ ಉಚಿತ ಸಮವಸ್ತ್ರ ನೀಡುವ ಘೋಷಣೆ

Suddi Udaya

ಇಂದು(ಎ.30): ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ರಘುಪತಿ ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸನ್ಮಾನ

Suddi Udaya

ಮಳೆಗೆ ಕೃತಕ ಕೆರೆಯಂತಾದ ಕಕ್ಕಿಂಜೆ–ನೆರಿಯ ರಸ್ತೆ

Suddi Udaya

ಅಗ್ನಿವೀರ್ ಜಿಡಿ ಹುದ್ದೆಗೆ ಆಯ್ಕೆಯಾದ ಗುರುಕಿರಣ್ ರವರಿಗೆ ಶ್ರೀ ರಾಮ್ ಫ್ರೆಂಡ್ಸ್ ಬಾಜಾರು ವತಿಯಿಂದ ಸನ್ಮಾನ

Suddi Udaya

ಮೊಗ್ರು: ಶ್ರೀರಾಮ ಶಿಶು ಮಂದಿರದಲ್ಲಿ ವನಮಹೋತ್ಸವ

Suddi Udaya
error: Content is protected !!