September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ: ಅಕ್ರಮ ವೈನ್ ದಾಸ್ತಾನು ಸ್ಟೋರ್ ಮೇಲೆ ಬೆಳ್ತಂಗಡಿ ಅಬಕಾರಿ ದಾಳಿ ರೂ.2 ಲಕ್ಷ ಮೌಲ್ಯದ ವೈನ್ ವಶ

ಬೆಳ್ತಂಗಡಿ : ನಿಷೇಧಿತ ಹೋಮ್ ಮೇಡ್ ವೈನ್ ಮಾರಾಟ ಮಾಡುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಅಬಕಾರಿ ದಳದದವರು ದಾಳಿ ನಡೆಸಿದ್ದಾರೆ. ನಿಡ್ಲೆ ಗ್ರಾಮದ ಜಿತೇಂದ್ರ ಎಂಬವರ ಸ್ಟೋರ್ ನಲ್ಲಿ ಹೋಮ್ ಮೇಡ್ ವೈನ್ ವೈನ್ ನನ್ನು ಹೊರ ಜಿಲ್ಲೆಯಿಂದ ಖರೀದಿಸಿ ದಾಸ್ತಾನು ಮಾಡಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬೆಳ್ತಂಗಡಿ ಅಬಕಾರಿ ದಳದ ಇನ್ಸ್ಪೆಕ್ಟರ್ ಲಕ್ಷ್ಮಣ್ ಉಪ್ಪಾರ್ ಮತ್ತು ತಂಡ ಮಾ.20 ರಂದು ಸಂಜೆ 4 ಗಂಟೆಗೆ ದಾಳಿ ಮಾಡಿದ್ದಾರೆ.

ದಾಳಿ ವೇಳೆ ಮಾರಾಟ ಮಾಡಲು ದಾಸ್ತಾನು ಮಾಡಿದ್ದ ಹೋಮ್ ಮೇಡ್ ವೈನ್ 306 ಲೀಟರ್ ವಶಪಡಿಸಿಕೊಂಡಿದ್ದು. ಇದರ ಮೌಲ್ಯ ಸುಮಾರು 2,01,960 ಲಕ್ಷ ರೂಪಾಯಿ ಅಗಿದ್ದು.‌ಆರೋಪಿಯನ್ನು ವಶಕ್ಕೆ ಪಡೆದು ಆತನ ವಿರುದ್ಧ ಬೆಳ್ತಂಗಡಿ ಅಬಕಾರಿ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ ಅಬಕಾರಿ ದಳದ ಇನ್ಸ್ಪೆಕ್ಟರ್ ಲಕ್ಷಣ್ ಉಪ್ಪಾರ್, ಹೆಡ್ ಕಾನ್ಸ್‌ಟೇಬಲ್ ಬೋಜ ಕೆ, ವಿನಯ್ , ಶಿವಶಂಕರಪ್ಪ ಮತ್ತು ವಾಹನ ಚಾಲಕ ನವೀನ್ ಭಾಗವಹಿಸಿದರು.

Related posts

ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವರುಗಳಾದ ರಮಾನಾಥ ರೈ, ವಿನಯ ಕುಮಾರ್ ಸೊರಕೆ ಭೇಟಿ

Suddi Udaya

ಮಂಗಳೂರು ಕ್ಯಾಂಪ್ಕೊ ಸಾಂತ್ವನ” ಯೋಜನೆಯಡಿ ಸಹಾಯಧನ ವಿತರಣೆ

Suddi Udaya

ನಾಳೆ(ಜ.2) ಅರಸಿನಮಕ್ಕಿಯಲ್ಲಿ ಶೀರೂರು ಶ್ರೀಗಳಿಗೆ ನಾಗರಿಕ ಸನ್ಮಾನ

Suddi Udaya

ಮುಂಡಾಜೆ: ವಿದ್ಯುತ್ ಲೈನ್ ಮೇಲೆ ಬಿದ್ದ ಮರ: ಗುಡ್ಡಕ್ಕೆ ಬೆಂಕಿ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನ: ವ್ಯವಸ್ಥಾಪನಾ ಸಮಿತಿಯ 9 ಸದಸ್ಯ ಸ್ಥಾನಕ್ಕೆ 28 ಮಂದಿ ಅರ್ಜಿ

Suddi Udaya

“ಸಿಂಧೂರ್” ಅರ್ಥಪೂರ್ಣವಾದ ಆಪರೇಷನ್: ಪೀತಾಂಬರ ಹೆರಾಜೆ

Suddi Udaya
error: Content is protected !!