April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲಿನಲ್ಲಿ ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ: ಆರೋಪಿ ದಯಾನಂದ ಸಹಿತ ರೂ.45 ಸಾವಿರ ಮೌಲ್ಯದ ಮದ್ಯ ವಶಕ್ಕೆ

ಬೆಳ್ತಂಗಡಿ : ಅಕ್ರಮವಾಗಿ ಗೋಡೌನ್ ನಲ್ಲಿ ಮದ್ಯವನ್ನು ದಾಸ್ತಾನು ಮಾಡಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಂಗಳೂರು ಅಬಕಾರಿ ಡಿಸಿ ವಿಶೇಷ ಪತ್ತೆ ದಳ ಸಿಬ್ಬಂದಿಗಳು ದಾಳಿ ಮಾಡಿ ಮದ್ಯ ಹಾಗೂ ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ಮಾ.21ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಿನಂದೆಲ್ ಬಾನಿ ಮೆನ್ಸ್ ಪಾರ್ಲರ್ ನ ಹಿಂಭಾಗದ ಗೋಡೌನ್ ನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಬಾರ್ ಅಥವಾ ವೈನ್ ಶಾಪ್‌ ನಿಂದ ಖರೀದಿಸಿ ಅಕ್ರಮವಾಗಿ ಮದ್ಯ ಶೇಖರಿಸಿಟ್ಟದ್ದ ಬಗ್ಗೆ ಮಂಗಳೂರು ಅಬಕಾರಿ ಡಿಸಿ ವಿಶೇಷ ಪತ್ತೆ ದಳಕ್ಕೆ ಬಂದ ಖಚಿತ ಮಾಹಿತಿ ಮೇರೆಗೆ ಮಾ. 21 ರಂದು ಸಂಜೆ 6 ಗಂಟೆಗೆ ದಾಳಿ ಮಾಡಿದ್ದಾರೆ.

ವಶಪಡಿಸಿಕೊಂಡ ಅಕ್ರಮ ಮದ್ಯ 67.950 ಲೀಟರ್ ಮತ್ತು ಬಿಯರ್ 68.680 ಲೀಟರ್ ವಶಕ್ಕೆ ಪಡೆದುಕೊಂಡಿದ್ದು ಇದರ ಮೌಲ್ಯ ಸುಮಾರು 45,000 ರೂಪಾಯಿ ಅಗಿದೆ. ಆರೋಪಿ ಬೆಳ್ತಂಗಡಿ ತಾಲೂಕು ಬೆಳಾಲು ಗ್ರಾಮದ ಮಿನಂದೆಲ್ ನಿವಾಸಿ ಶೀನಾ ಗೌಡರ ಮಗ ದಯಾನಂದ ಗೌಡ (47) ಎಂಬಾತನನ್ನು ಬಂಧಿಸಲಾಗಿದೆ‌.ಬೆಳ್ತಂಗಡಿ ಅಬಕಾರಿ ದಳ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಯಾಚರಣೆಯಲ್ಲಿ ಮಂಗಳೂರು ಅಬಕಾರಿ ಡಿಸಿ ವಿಶೇಷ ಪತ್ತೆ ದಳದ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿಗಳು ಭಾಗವಹಿಸಿದರು‌

Related posts

ವೇಣೂರು ಐಟಿಐ ಕಾಲೇಜಿನಲ್ಲಿ ಯುವ ಮತ್ತು ಭವಿಷ್ಯದ ಮತದಾರರೊಂದಿಗೆ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ ಸಂವಾದ

Suddi Udaya

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಮರಗಳು ಉರುಳಿ ಎರಡು ಗಂಟೆ ಟ್ರಾಫಿಕ್ ಜಾಮ್- ವಾಹನ ಸವಾರರ ಪರದಾಟ- ಮರಗಳು ತೆರವು

Suddi Udaya

ಉಜಿರೆ: ಅಂತರ್ ಕಾಲೇಜು ಮಟ್ಟದ ವಾಲಿಬಾಲ್ ಪಂದ್ಯಾಟ: ಎಸ್ ಡಿ ಎಮ್ ಕಾಲೇಜಿಗೆ ಚಾಂಪಿಯನ್ ಶಿಪ್ ಪಟ್ಟ

Suddi Udaya

ಪಿಲ್ಯ: ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ

Suddi Udaya

ಕಳೆ ತೆಗೆಯುವ ಯಂತ್ರಕ್ಕೆ ಸಿಲುಕಿ ಎದೆಗೆ ಬಡಿದ ರಬ್ಬರ್ ಕಪ್‌ನ ಸರಿಗೆ: ಕಾಯರ್ತಡ್ಕ ನಿವಾಸಿ ಕೊರಗಪ್ಪ ಗೌಡ ಸಾವು

Suddi Udaya

ಬೆಳ್ತಂಗಡಿ ತಾಲೂಕು ರಾಮ ಕ್ಷತ್ರಿಯ ಸಂಘದ 22ನೇ ವಾರ್ಷಿಕೋತ್ಸವ – ರಾಮಕ್ಷತ್ರಿಯ ಮಹಿಳಾ ವೃಂದದ ಉದ್ಘಾಟನೆ – ರಾಮಕ್ಷತ್ರಿಯ ಯುವ ವೇದಿಕೆಯ ಉದ್ಘಾಟನೆ – ಸಂಭ್ರಮದ “ಕ್ಷತ್ರಿಯ ಸಂಗಮ” ಸಾಧಕರಿಗೆ ಸನ್ಮಾನ, ಹಿರಿಯರಿಗೆ ಗೌರವಾರ್ಪಣೆ

Suddi Udaya
error: Content is protected !!