22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ದೇವರ ದಶ೯ನ ಬಲಿ ಉತ್ಸವ

ನಡ: ನಾಡಿನ ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಶ್ರೀ ಸದಾಶಿವ ರುದ್ರ ದೇವಸ್ಥಾನ ಸುರ್ಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ವರ್ಷಾವಧಿ ಜಾತ್ರ ಮಹೋತ್ಸವ ಮಾ.18ರಿಂದ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಗಳೊಂದಿಗೆ ಆರಂಭಗೊಂಡಿದ್ದು, ಮಾ.22ರಂದು ಬೆಳಗ್ಗೆ ದೇವರ ದರ್ಶನ ಬಲಿ ಉತ್ಸವ, ಮಹಾಪೂಜೆ ನಡೆಯಿತು.

ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರ ಡಾ| ಸತೀಶ್ಚಂದ್ರ ಸುರ್ಯಗುತ್ತು, ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ, ಧನಂಜಯ ಅಜ್ರಿ ನಡಗುತ್ತು, ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ.ರಾಜಶೇಖರ ಅಜ್ರಿ, ಬಿ. ಮುನಿರಾಜ ಅಜ್ರಿ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮಾ.18ರಂದು ದೇವರ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಗಣಪತಿ ಹೋಮ, ಕಲಶ ಪೂಜೆ, ಕಲಶಾಭಿಷೇಕ ಮಹಾಪೂಜೆ ರಾತ್ರಿ ರಂಗಪೂಜೆ ದೇವರ ಉತ್ಸವ ನಡೆಯಿತು. ಮಾ.19 ರಂದು ಗಣಪತಿ ಹೋಮ, ನವಕ ಪ್ರಧಾನ ಕಲಶಾಭಿಷೇಕ, ಧ್ವಜಾರೋಹಣ, ನಿತ್ಯಬಲಿ ಮೊದಲಾದ ಕಾರ್ಯಕ್ರಮಗಳು ಜರುಗಿತು. ಮಾ.20ರಂದು ಮಹಾಪೂಜೆ, ನಿತ್ಯಬಲಿ, ಸಂಜೆ ಸುರ್ಯಗುತ್ತು ಮನೆಯಿಂದ ದೈವಗಳ ಭಂಡಾರ ತರಲಾಯಿತು. ನಂತರ ಉತ್ಸವ ಹೊರಟು ವಸಂತಕಟ್ಟೆ ಪೂಜೆ ಜರುಗಿತು. ಮಾ.21ರಂದು ಸೊಡಬಲಿ ಉತ್ಸವ ಬಳಿಕ ಮಹಾಪೂಜೆ ಜರುಗಿತು.
ರಾತ್ರಿ ಉತ್ಸವ ಹೊರಟು ನೃತ್ಯ ಉತ್ಸವ, ರಥಕಟ್ಟೆ ಪೂಜೆ, ಮಹಾಪೂಜೆ, ಶಯನೋತ್ಸವ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.

Related posts

ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ, ಕೆ.ಟಿ.ಗಟ್ಟಿ ನಿಧನಕ್ಕೆ ಪ್ರತಾಪ್ ಸಿಂಹ ನಾಯಕ್ ಸಂತಾಪ

Suddi Udaya

ಕೌಟುಂಬಿಕ ಕಲಹ: ಜೀವ ಬೆದರಿಕೆ

Suddi Udaya

ಎಸ್.ಡಿ.ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ

Suddi Udaya

ಲಾಯಿಲ : ಡಿಸೇಲ್ ಇಲ್ಲದೆ ಕೈಕೊಟ್ಟ ಕೆಎಸ್ಸಾರ್ಟಿಸಿ ಬಸ್: ಸಂದಿಗ್ಧ ಸ್ಥಿತಿಯಲ್ಲಿ ಪ್ರಯಾಣಿಕರು

Suddi Udaya

ಗುರುವಾಯನಕೆರೆ ಪಾಲಡ್ಕ ಒಕ್ಕೂಟದ ಬೆಳ್ಳಿ ಹಬ್ಬ ಕಾರ್ಯಕ್ರಮ

Suddi Udaya

ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ

Suddi Udaya
error: Content is protected !!