25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ದೇವರ ದಶ೯ನ ಬಲಿ ಉತ್ಸವ

ನಡ: ನಾಡಿನ ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಶ್ರೀ ಸದಾಶಿವ ರುದ್ರ ದೇವಸ್ಥಾನ ಸುರ್ಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ವರ್ಷಾವಧಿ ಜಾತ್ರ ಮಹೋತ್ಸವ ಮಾ.18ರಿಂದ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಗಳೊಂದಿಗೆ ಆರಂಭಗೊಂಡಿದ್ದು, ಮಾ.22ರಂದು ಬೆಳಗ್ಗೆ ದೇವರ ದರ್ಶನ ಬಲಿ ಉತ್ಸವ, ಮಹಾಪೂಜೆ ನಡೆಯಿತು.

ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರ ಡಾ| ಸತೀಶ್ಚಂದ್ರ ಸುರ್ಯಗುತ್ತು, ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ, ಧನಂಜಯ ಅಜ್ರಿ ನಡಗುತ್ತು, ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ.ರಾಜಶೇಖರ ಅಜ್ರಿ, ಬಿ. ಮುನಿರಾಜ ಅಜ್ರಿ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮಾ.18ರಂದು ದೇವರ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಗಣಪತಿ ಹೋಮ, ಕಲಶ ಪೂಜೆ, ಕಲಶಾಭಿಷೇಕ ಮಹಾಪೂಜೆ ರಾತ್ರಿ ರಂಗಪೂಜೆ ದೇವರ ಉತ್ಸವ ನಡೆಯಿತು. ಮಾ.19 ರಂದು ಗಣಪತಿ ಹೋಮ, ನವಕ ಪ್ರಧಾನ ಕಲಶಾಭಿಷೇಕ, ಧ್ವಜಾರೋಹಣ, ನಿತ್ಯಬಲಿ ಮೊದಲಾದ ಕಾರ್ಯಕ್ರಮಗಳು ಜರುಗಿತು. ಮಾ.20ರಂದು ಮಹಾಪೂಜೆ, ನಿತ್ಯಬಲಿ, ಸಂಜೆ ಸುರ್ಯಗುತ್ತು ಮನೆಯಿಂದ ದೈವಗಳ ಭಂಡಾರ ತರಲಾಯಿತು. ನಂತರ ಉತ್ಸವ ಹೊರಟು ವಸಂತಕಟ್ಟೆ ಪೂಜೆ ಜರುಗಿತು. ಮಾ.21ರಂದು ಸೊಡಬಲಿ ಉತ್ಸವ ಬಳಿಕ ಮಹಾಪೂಜೆ ಜರುಗಿತು.
ರಾತ್ರಿ ಉತ್ಸವ ಹೊರಟು ನೃತ್ಯ ಉತ್ಸವ, ರಥಕಟ್ಟೆ ಪೂಜೆ, ಮಹಾಪೂಜೆ, ಶಯನೋತ್ಸವ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.

Related posts

ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ಸಭೆ: ಅಡಕೆ ನಿಷೇಧದ ಆತಂಕ ನಿವಾರಣೆಗೆ ಪ್ರಯತ್ನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ನ 50ನೇ ವರ್ಷದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬಸ್ಥರಿಂದ ಮತ ಚಲಾವಣೆ

Suddi Udaya

ರೆಖ್ಯ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರು ನಡುವೆ ಅಪಘಾತ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya

ಆ.15: ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya
error: Content is protected !!