22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ದೇವರ ದಶ೯ನ ಬಲಿ ಉತ್ಸವ

ನಡ: ನಾಡಿನ ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಶ್ರೀ ಸದಾಶಿವ ರುದ್ರ ದೇವಸ್ಥಾನ ಸುರ್ಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ವರ್ಷಾವಧಿ ಜಾತ್ರ ಮಹೋತ್ಸವ ಮಾ.18ರಿಂದ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಗಳೊಂದಿಗೆ ಆರಂಭಗೊಂಡಿದ್ದು, ಮಾ.22ರಂದು ಬೆಳಗ್ಗೆ ದೇವರ ದರ್ಶನ ಬಲಿ ಉತ್ಸವ, ಮಹಾಪೂಜೆ ನಡೆಯಿತು.

ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರ ಡಾ| ಸತೀಶ್ಚಂದ್ರ ಸುರ್ಯಗುತ್ತು, ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ, ಧನಂಜಯ ಅಜ್ರಿ ನಡಗುತ್ತು, ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ.ರಾಜಶೇಖರ ಅಜ್ರಿ, ಬಿ. ಮುನಿರಾಜ ಅಜ್ರಿ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮಾ.18ರಂದು ದೇವರ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಗಣಪತಿ ಹೋಮ, ಕಲಶ ಪೂಜೆ, ಕಲಶಾಭಿಷೇಕ ಮಹಾಪೂಜೆ ರಾತ್ರಿ ರಂಗಪೂಜೆ ದೇವರ ಉತ್ಸವ ನಡೆಯಿತು. ಮಾ.19 ರಂದು ಗಣಪತಿ ಹೋಮ, ನವಕ ಪ್ರಧಾನ ಕಲಶಾಭಿಷೇಕ, ಧ್ವಜಾರೋಹಣ, ನಿತ್ಯಬಲಿ ಮೊದಲಾದ ಕಾರ್ಯಕ್ರಮಗಳು ಜರುಗಿತು. ಮಾ.20ರಂದು ಮಹಾಪೂಜೆ, ನಿತ್ಯಬಲಿ, ಸಂಜೆ ಸುರ್ಯಗುತ್ತು ಮನೆಯಿಂದ ದೈವಗಳ ಭಂಡಾರ ತರಲಾಯಿತು. ನಂತರ ಉತ್ಸವ ಹೊರಟು ವಸಂತಕಟ್ಟೆ ಪೂಜೆ ಜರುಗಿತು. ಮಾ.21ರಂದು ಸೊಡಬಲಿ ಉತ್ಸವ ಬಳಿಕ ಮಹಾಪೂಜೆ ಜರುಗಿತು.
ರಾತ್ರಿ ಉತ್ಸವ ಹೊರಟು ನೃತ್ಯ ಉತ್ಸವ, ರಥಕಟ್ಟೆ ಪೂಜೆ, ಮಹಾಪೂಜೆ, ಶಯನೋತ್ಸವ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.

Related posts

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳ ಮಾಸಿಕ ಸಭೆ

Suddi Udaya

ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪ್ರತಿಭಟನೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ರೂ.5 ಲಕ್ಷ ಅನುದಾನ ಬಿಡುಗಡೆ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ವಿಶ್ವ ಸೈಕಲ್ ದಿನ ಜಾಗೃತಿ ರ‍್ಯಾಲಿ

Suddi Udaya

ಬೆಳ್ತಂಗಡಿ ಬಿಷಪ್ ರಿಗೆ ಲಯನ್ಸ್ ಕ್ಲಬ್ ನಿಂದ ಬೆಳ್ಳಿಹಬ್ಬ ವರ್ಷದ “ಗೌರವಾಭಿನಂದನೆ”

Suddi Udaya
error: Content is protected !!