July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

ಮಿತ್ತಬಾಗಿಲು: ಇಲ್ಲಿಯ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಮಾ.22 ರಂದು ವೇದಮೂರ್ತಿ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ವಿವಿಧ ತಾಂತ್ರಿಕ, ವೈದಿಕ ಕಾರ್ಯಕ್ರಮ ನಡೆಯಿತು.

ನಂತರ ನಡೆದ ಧಾರ್ಮಿಕ ಸಭೆಯಲ್ಲಿ ಸುಬ್ರಹ್ಮಣ್ಯ ಮಠ ಡಾ|| ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.

ಅಧ್ಯಕ್ಷತೆಯನ್ನು ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಮೋಹನ್ ಆಳ್ವ, ವಹಿಸಿದರು.

ಮುಖ್ಯ ಅತಿಥಿಗಳಾಗಿ ಉಜಿರೆ ಎಸ್‌ಡಿಎಂ ಕಾಲೇಜಿನ ಪ್ರಾಂಶುಪಾಲ ಡಾ. ಕುಮಾರ್ ಹೆಗ್ಡೆ, ಉಜಿರೆ ಸಂಧ್ಯಾ ಟ್ರೇಡರ್‍ಸ್ ನ ರಾಜೇಶ್ ಪೈ, ಧಾರ್ಮಿಕ ಪರಿಷತ್ ನ ಮಾಜಿ ಸದಸ್ಯ ಬಿ.ಎಸ್. ಮುಕುಂದ ಸುವರ್ಣ, ಮಲವಂತಿಗೆ ಗ್ರಾ.ಪಂ. ಮಾಜಿ ಅಧ್ಯಕ್ಷ ಎಸ್.ಎಂ. ತುಳುಪುಳೆ, ಬೆಳ್ತಂಗಡಿ ತಾಲೂಕು ಚಿತ್ಪಾವನಸಮಾಜದ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್, ಪ್ರಗತಿಪರ ಕೃಷಿಕ ಪೂವಣಿ ಗೌಡ ನೆಕ್ಕಿಲು ಮಲವಂತಿಗೆ, ಕೃಷಿಕ ಎಸ್.ಪಿ. ನಾರಾಯಣ ಗೌಡ ದಿಡುಪೆ, ಜಗನ್ಮಾತೆ ಬೈಲುವಾರು ಸಮಿತಿ ಪ್ರಮುಖ ಮಹೇಶ್ ಗೌಡ ಕರಿಯಾಲು, ಸರಸ್ವತಿ ಬೈಲುವಾರು ಸಮಿತಿ ಪ್ರಮುಖ ವಿಜಯ ಗೌಡ ಕರ್ಮಿಕಂಡ, ಭ್ರಮರಾಂಬಿಕೆ ಬೈಲುವಾರು ಸಮಿತಿ ಪ್ರಮುಖ ಉಮೇಶ್ ಪೂಜಾರಿ ಮಾಲೂರು, ಶಾರದಾಂಬಾ ಬೈಲುವಾರು ಸಮಿತಿ ಪ್ರಮುಖ ರಮಾನಂದ ಪೂಜಾರಿ ಮೇಲಿನ ಮಾಲೂರು, ನಾಗಾಂಬಿಕೆ ಬೈಲುವಾರು ಸಮಿತಿ ಪ್ರಮುಖ ಸಂಜೀವ ಗೌಡ, ಶಂಕರಿ ಬೈಲುವಾರು ಸಮಿತಿ ಪುರಂದರ ಗೌಡ ದರ್ಖಾಸು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಮೋಹನ್ ಬಂಗೇರ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ಕೆ. ಲೋಕೇಶ ರಾವ್, ಬ್ರಹ್ಮಕಲಶೋತ್ಸವ ಸಮಿತಿ ಪ್ರ. ಕಾರ್ಯದರ್ಶಿ ದಾಸಪ್ಪ ಗೌಡ ಕಾಂಜಾನು, ಜೀರ್ಣೋದ್ಧಾರ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಕೋಶಾಧಿಕಾರಿ ಕೆ. ವಾಸುದೇವ ರಾವ್ ಕಕ್ಕೆನೇಜಿ, ಬ್ರಹ್ಮಕಲಶೋತ್ಸವ ಸಮಿತಿ ಗೌರವ ಸಲಹೆಗಾರ ಬಿ. ಭುಜಬಲಿ ಧರ್ಮಸ್ಥಳ ಹಾಗೂ ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಭಕ್ತರು ಉಪಸ್ಥಿತರಿದ್ದರು.

ಸೌಂದರ್ಯ ಮತ್ತು ಧನ್ಯ ಪ್ರಾರ್ಥಿಸಿದರು. ಕೇಶವ ಫಡ್ಕೆ ಸ್ವಾಗತಿಸಿದರು. ಜಯಂತ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಾಲಯ ಸಮಿತಿ ಸಂಚಾಲಕ ಬಿ.ಕೆ. ಪರಮೇಶ್ವರ್ ರಾವ್ ಧನ್ಯವಾದವಿತ್ತರು.

Related posts

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

Suddi Udaya

ವೈಬ್ರೆಂಟ್ ಪ.ಪೂ. ಕಾಲೇಜಿನ ಕನ್ನಡ ಉಪನ್ಯಾಸಕ ನಿಕೇತ್ ಮೋಹನ್ ದಾಸ್ ಶೆಟ್ಟಿರವರಿಗೆ ಅತ್ಯುತ್ತಮ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಜ.14: ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ

Suddi Udaya

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಭೆ

Suddi Udaya
error: Content is protected !!