ಕಾರು ಹಾಗೂ ಒಮಿನಿ ವಾಹನದಲ್ಲಿ ಬಂದ ತಂಡದಿಂದ ಜೀವ ಬೆದರಿಕೆ ಆರೋಪ: ಬೆಳ್ತಂಗಡಿ ಪೊಲೀಸರಿಗೆ ದೂರು

Suddi Udaya

ಉಜಿರೆ: ಕಾರು ಹಾಗೂ ಒಮಿನಿ ವಾಹನದಲ್ಲಿ ಬಂದ ತಂಡವೊಂದು ತನ್ನನ್ನು ತಡೆದು ಅವಾಚ್ಯ ಶಬ್ದಗಳಿಂದ ಬೈಯ್ದು ಜೀವ ಬೆದರಿಕೆ ಒಡ್ಡಿರುವುದಾಗಿ ಉಜಿರೆ ಗ್ರಾಮದ ನಿವಾಸಿ ಹರೀಶ್‌ ಆಚಾರ್ಯ ಎಂಬವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮಾ. 21 ರಂದು ರಾತ್ರಿ ಉಜಿರೆ ಗ್ರಾಮದ ರಥಬೀದಿಯಲ್ಲಿರುವ ಸಮಯ, ಉಜಿರೆ ಗ್ರಾಮದ ಮನೋಜ, ಕಲ್ಮಂಜದ ಪ್ರಜ್ವಲ್‌ ಗೌಡ ಕೆ .ವಿ, ಹಾಗೂ ಉಜಿರೆಯ ಜಯಂತ ಎಂಬವರುಗಳು ಕಾರು ಹಾಗೂ ಒಮಿನಿ ಗಾಡಿಯಲ್ಲಿ ಬಂದು ತನ್ನ ನ್ನು ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಒಡ್ಡಿರುತ್ತಾರೆ ಆರೋಪಿಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ, ಅಕ್ರ ನಂ 38/2024 ಕಲಂ: 143,147,341,504,506, r/w 149 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Leave a Comment

error: Content is protected !!