23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾರು ಹಾಗೂ ಒಮಿನಿ ವಾಹನದಲ್ಲಿ ಬಂದ ತಂಡದಿಂದ ಜೀವ ಬೆದರಿಕೆ ಆರೋಪ: ಬೆಳ್ತಂಗಡಿ ಪೊಲೀಸರಿಗೆ ದೂರು

ಉಜಿರೆ: ಕಾರು ಹಾಗೂ ಒಮಿನಿ ವಾಹನದಲ್ಲಿ ಬಂದ ತಂಡವೊಂದು ತನ್ನನ್ನು ತಡೆದು ಅವಾಚ್ಯ ಶಬ್ದಗಳಿಂದ ಬೈಯ್ದು ಜೀವ ಬೆದರಿಕೆ ಒಡ್ಡಿರುವುದಾಗಿ ಉಜಿರೆ ಗ್ರಾಮದ ನಿವಾಸಿ ಹರೀಶ್‌ ಆಚಾರ್ಯ ಎಂಬವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮಾ. 21 ರಂದು ರಾತ್ರಿ ಉಜಿರೆ ಗ್ರಾಮದ ರಥಬೀದಿಯಲ್ಲಿರುವ ಸಮಯ, ಉಜಿರೆ ಗ್ರಾಮದ ಮನೋಜ, ಕಲ್ಮಂಜದ ಪ್ರಜ್ವಲ್‌ ಗೌಡ ಕೆ .ವಿ, ಹಾಗೂ ಉಜಿರೆಯ ಜಯಂತ ಎಂಬವರುಗಳು ಕಾರು ಹಾಗೂ ಒಮಿನಿ ಗಾಡಿಯಲ್ಲಿ ಬಂದು ತನ್ನ ನ್ನು ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಒಡ್ಡಿರುತ್ತಾರೆ ಆರೋಪಿಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ, ಅಕ್ರ ನಂ 38/2024 ಕಲಂ: 143,147,341,504,506, r/w 149 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಧರ್ಮಸ್ಥಳ: ಪುನಶ್ಚೇತನಾ ಕಾರ್ಯಾಗಾರದ ಸಮಾರೋಪ ಸಮಾರಂಭ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಮಾರ್ಗದರ್ಶನ

Suddi Udaya

ಸರ್ಕಾರದ ಹಿಂದೂ ವಿರೋಧಿ ‘ದ್ವೇಷ ಭಾಷಣ ತಡೆ ಕಾಯಿದೆ’ ಮತ್ತು ಬಾಂಗ್ಲಾದೇಶದ ಹಿಂದೂ ಹತ್ಯಾಕಾಂಡದ ವಿರುದ್ಧ ಬೆಳ್ತಂಗಡಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ

Suddi Udaya

ರಾಷ್ಟ್ರಮಟ್ಟದ ಟೆಕ್ನೋ ಕಲ್ಚರ್ ಫೆಸ್ಟ್ ಇನ್ಸಿಗ್ನಿಯಾ: ಉಜಿರೆ ಎಸ್.ಡಿ.ಎಂ.ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ಇಬ್ಬರು ವಿದ್ಯಾರ್ಥಿಗಳು Quest Global ಸಂಸ್ಥೆಯ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸುವರ್ಣ ಮಹೋತ್ಸವ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಲೋಕಾರ್ಪಣೆ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಗೆ ರಾಜ್ಯಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!