June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು: ಅಕ್ರಮವಾಗಿ ಮದ್ಯ ಮಾರಾಟ: ಬೆಳ್ತಂಗಡಿ ಪೊಲೀಸರಿಂದ ದಾಳಿ

ಕೊಯ್ಯೂರು : ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ ಘಟನೆ ಕೊಯ್ಯೂರು ಗ್ರಾಮದ ನೆಕ್ಕಿಲು ಎಂಬಲ್ಲಿ ಮಾ.21 ರಂದು ನಡೆದಿದೆ.

ಕೊಯ್ಯೂರು ಗ್ರಾಮದ ನೆಕ್ಕಿಲ್‌ ಬೆಳಾಲು ಅನಂತೋಡಿ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಹೋಗುವ ಮಣ್ಣು ರಸ್ತೆಯ ಬದಿ, ಸಾರ್ವಜನಿಕ ಸ್ಥಳದಲ್ಲಿ, ಬೇರೆ ಬೇರೆ ವೈನ್ ಶಾಪ್ ಗಳಿಂದ ವಿಸ್ಕಿ ಸ್ಯಾಚೆಟ್ ಗಳನ್ನು ಖರೀದಿಸಿ ಹೆಚ್ಚು ಹಣಕ್ಕೆ ಮಾರಾಟಕ್ಕೆ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟುಕೊಂಡಿದ್ದ, ಕೊಯ್ಯೂರು ನಿವಾಸಿ ವಸಂತ (42) ಎಂಬಾತನನ್ನು‌ ವಶಕ್ಕೆ ಪಡೆದ, ಬೆಳ್ತಂಗಡಿ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕರಾದ ಮುರುಳೀಧರ ನಾಯ್ಕರವರು ಹಾಗೂ ಸಿಬ್ಬಂದಿಗಳು, ಆತನ ಬಳಿಯಿದ್ದ 90 ಎಂ.ಎಲ್. ಪರಿಮಾಣದ ಒಟ್ಟು 53 ಸ್ಯಾಚೆಟ್‌ ಗಳನ್ನು (ಒಟ್ಟು ಮೌಲ್ಯ ರೂ 2125/- ) ಹಾಗೂ ಮದ್ಯ ಮಾರಾಟದಿಂದ ಸಂಗ್ರಹಿಸಿದ ಒಟ್ಟು ರೂ 230/- ರೂ ನಗದು ಹಣವನ್ನು ಸ್ವಾಧಿನಪಡಿಸಿಕೊಂಡು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರ 37/2024 ಕಲಂ: 32.34 ಕೆ ಇ ಆಕ್ಟ್‌ -1965 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಉಜಿರೆ ನೀರಚಿಲುಮೆ ಬಳಿ ಬೈಕ್ ಕಾರು ಅಪಘಾತ

Suddi Udaya

ಮುಗೇರಡ್ಕ ದೈವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ನಾಗೇಶ್ ಕದ್ರಿ ನೇಮಕ

Suddi Udaya

ಬಿಜೆಪಿ ತೆಕ್ಕೆಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಬಿರುಸಿನ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ -9, ಕಾಂಗ್ರೇಸ್ -3 ಗೆಲುವು

Suddi Udaya

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya
error: Content is protected !!