September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು: ಅಕ್ರಮವಾಗಿ ಮದ್ಯ ಮಾರಾಟ: ಬೆಳ್ತಂಗಡಿ ಪೊಲೀಸರಿಂದ ದಾಳಿ

ಕೊಯ್ಯೂರು : ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ ಘಟನೆ ಕೊಯ್ಯೂರು ಗ್ರಾಮದ ನೆಕ್ಕಿಲು ಎಂಬಲ್ಲಿ ಮಾ.21 ರಂದು ನಡೆದಿದೆ.

ಕೊಯ್ಯೂರು ಗ್ರಾಮದ ನೆಕ್ಕಿಲ್‌ ಬೆಳಾಲು ಅನಂತೋಡಿ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಹೋಗುವ ಮಣ್ಣು ರಸ್ತೆಯ ಬದಿ, ಸಾರ್ವಜನಿಕ ಸ್ಥಳದಲ್ಲಿ, ಬೇರೆ ಬೇರೆ ವೈನ್ ಶಾಪ್ ಗಳಿಂದ ವಿಸ್ಕಿ ಸ್ಯಾಚೆಟ್ ಗಳನ್ನು ಖರೀದಿಸಿ ಹೆಚ್ಚು ಹಣಕ್ಕೆ ಮಾರಾಟಕ್ಕೆ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟುಕೊಂಡಿದ್ದ, ಕೊಯ್ಯೂರು ನಿವಾಸಿ ವಸಂತ (42) ಎಂಬಾತನನ್ನು‌ ವಶಕ್ಕೆ ಪಡೆದ, ಬೆಳ್ತಂಗಡಿ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕರಾದ ಮುರುಳೀಧರ ನಾಯ್ಕರವರು ಹಾಗೂ ಸಿಬ್ಬಂದಿಗಳು, ಆತನ ಬಳಿಯಿದ್ದ 90 ಎಂ.ಎಲ್. ಪರಿಮಾಣದ ಒಟ್ಟು 53 ಸ್ಯಾಚೆಟ್‌ ಗಳನ್ನು (ಒಟ್ಟು ಮೌಲ್ಯ ರೂ 2125/- ) ಹಾಗೂ ಮದ್ಯ ಮಾರಾಟದಿಂದ ಸಂಗ್ರಹಿಸಿದ ಒಟ್ಟು ರೂ 230/- ರೂ ನಗದು ಹಣವನ್ನು ಸ್ವಾಧಿನಪಡಿಸಿಕೊಂಡು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರ 37/2024 ಕಲಂ: 32.34 ಕೆ ಇ ಆಕ್ಟ್‌ -1965 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕಳೆಂಜ: ನಂದಗೋಕುಲ ದೀಪೋತ್ಸವ ಕಾರ್ಯಕ್ರಮ ಮುಂದೂಡಿಕೆ

Suddi Udaya

ಜು.15: ಧರ್ಮಸ್ಥಳದಲ್ಲಿ ಆತಿಥ್ಯ ವೆಜ್ ಹೊಟೇಲ್ ಶುಭಾರಂಭ

Suddi Udaya

ಕುತ್ಲೂರು: ಅಕ್ರಮ ಗೋಮಾಂಸ ಸಾಗಾಟ : ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಶ್ರಮದಾನ ಆರಂಭ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜೂನಿಯರ್ ರೆಡ್ ಕ್ರಾಸ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya
error: Content is protected !!