July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು: ಅಕ್ರಮವಾಗಿ ಮದ್ಯ ಮಾರಾಟ: ಬೆಳ್ತಂಗಡಿ ಪೊಲೀಸರಿಂದ ದಾಳಿ

ಕೊಯ್ಯೂರು : ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ ಘಟನೆ ಕೊಯ್ಯೂರು ಗ್ರಾಮದ ನೆಕ್ಕಿಲು ಎಂಬಲ್ಲಿ ಮಾ.21 ರಂದು ನಡೆದಿದೆ.

ಕೊಯ್ಯೂರು ಗ್ರಾಮದ ನೆಕ್ಕಿಲ್‌ ಬೆಳಾಲು ಅನಂತೋಡಿ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಹೋಗುವ ಮಣ್ಣು ರಸ್ತೆಯ ಬದಿ, ಸಾರ್ವಜನಿಕ ಸ್ಥಳದಲ್ಲಿ, ಬೇರೆ ಬೇರೆ ವೈನ್ ಶಾಪ್ ಗಳಿಂದ ವಿಸ್ಕಿ ಸ್ಯಾಚೆಟ್ ಗಳನ್ನು ಖರೀದಿಸಿ ಹೆಚ್ಚು ಹಣಕ್ಕೆ ಮಾರಾಟಕ್ಕೆ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟುಕೊಂಡಿದ್ದ, ಕೊಯ್ಯೂರು ನಿವಾಸಿ ವಸಂತ (42) ಎಂಬಾತನನ್ನು‌ ವಶಕ್ಕೆ ಪಡೆದ, ಬೆಳ್ತಂಗಡಿ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕರಾದ ಮುರುಳೀಧರ ನಾಯ್ಕರವರು ಹಾಗೂ ಸಿಬ್ಬಂದಿಗಳು, ಆತನ ಬಳಿಯಿದ್ದ 90 ಎಂ.ಎಲ್. ಪರಿಮಾಣದ ಒಟ್ಟು 53 ಸ್ಯಾಚೆಟ್‌ ಗಳನ್ನು (ಒಟ್ಟು ಮೌಲ್ಯ ರೂ 2125/- ) ಹಾಗೂ ಮದ್ಯ ಮಾರಾಟದಿಂದ ಸಂಗ್ರಹಿಸಿದ ಒಟ್ಟು ರೂ 230/- ರೂ ನಗದು ಹಣವನ್ನು ಸ್ವಾಧಿನಪಡಿಸಿಕೊಂಡು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರ 37/2024 ಕಲಂ: 32.34 ಕೆ ಇ ಆಕ್ಟ್‌ -1965 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ನಾರ್ಯ ಪೊದುಂಬಿಲ ಕೆಸರ್ ದ ಕಂಡಡ್ ಪರ್ಬದ ಗೊಬ್ಬು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳರವರಿಗೆ ಹಿಮಾಲಯ ವೃಕ್ಷಮಣಿದಾರರ ಪ್ರಶಸ್ತಿ ಪ್ರದಾನ

Suddi Udaya

ದ.ಕ‌ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರ ಭೇಟಿ: ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಕೆ

Suddi Udaya

ಉಜಿರೆ: ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಮೇ 7ರಂದು ಮೇಲಂತಬೆಟ್ಟು ಜೇಸಿಂತ ಮೋನಿಸ್ ರವರ ಅಂತ್ಯಕ್ರಿಯೆ

Suddi Udaya

ವೇಣೂರು ಸರಕಾರಿ ಜಾಗದಲ್ಲಿ ಚಿರತೆಯ ಮೃತದೇಹ ಪತ್ತೆ

Suddi Udaya
error: Content is protected !!