32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ: ಅಕ್ರಮ ವೈನ್ ದಾಸ್ತಾನು ಸ್ಟೋರ್ ಮೇಲೆ ಬೆಳ್ತಂಗಡಿ ಅಬಕಾರಿ ದಾಳಿ ರೂ.2 ಲಕ್ಷ ಮೌಲ್ಯದ ವೈನ್ ವಶ

ಬೆಳ್ತಂಗಡಿ : ನಿಷೇಧಿತ ಹೋಮ್ ಮೇಡ್ ವೈನ್ ಮಾರಾಟ ಮಾಡುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಅಬಕಾರಿ ದಳದದವರು ದಾಳಿ ನಡೆಸಿದ್ದಾರೆ. ನಿಡ್ಲೆ ಗ್ರಾಮದ ಜಿತೇಂದ್ರ ಎಂಬವರ ಸ್ಟೋರ್ ನಲ್ಲಿ ಹೋಮ್ ಮೇಡ್ ವೈನ್ ವೈನ್ ನನ್ನು ಹೊರ ಜಿಲ್ಲೆಯಿಂದ ಖರೀದಿಸಿ ದಾಸ್ತಾನು ಮಾಡಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬೆಳ್ತಂಗಡಿ ಅಬಕಾರಿ ದಳದ ಇನ್ಸ್ಪೆಕ್ಟರ್ ಲಕ್ಷ್ಮಣ್ ಉಪ್ಪಾರ್ ಮತ್ತು ತಂಡ ಮಾ.20 ರಂದು ಸಂಜೆ 4 ಗಂಟೆಗೆ ದಾಳಿ ಮಾಡಿದ್ದಾರೆ.

ದಾಳಿ ವೇಳೆ ಮಾರಾಟ ಮಾಡಲು ದಾಸ್ತಾನು ಮಾಡಿದ್ದ ಹೋಮ್ ಮೇಡ್ ವೈನ್ 306 ಲೀಟರ್ ವಶಪಡಿಸಿಕೊಂಡಿದ್ದು. ಇದರ ಮೌಲ್ಯ ಸುಮಾರು 2,01,960 ಲಕ್ಷ ರೂಪಾಯಿ ಅಗಿದ್ದು.‌ಆರೋಪಿಯನ್ನು ವಶಕ್ಕೆ ಪಡೆದು ಆತನ ವಿರುದ್ಧ ಬೆಳ್ತಂಗಡಿ ಅಬಕಾರಿ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ ಅಬಕಾರಿ ದಳದ ಇನ್ಸ್ಪೆಕ್ಟರ್ ಲಕ್ಷಣ್ ಉಪ್ಪಾರ್, ಹೆಡ್ ಕಾನ್ಸ್‌ಟೇಬಲ್ ಬೋಜ ಕೆ, ವಿನಯ್ , ಶಿವಶಂಕರಪ್ಪ ಮತ್ತು ವಾಹನ ಚಾಲಕ ನವೀನ್ ಭಾಗವಹಿಸಿದರು.

Related posts

ಕೃಷಿ ಕ್ಷೇತ್ರದ ಸಾಧನೆ ಮತ್ತು ಸಮಾಜ ಸೇವಾಕಾರ್ಯ ಗುರುತಿಸಿ ಏಶ್ಯಾಕಲ್ಚರಲ್ ಎಂಡ್‌ ಸಂಶೋಧನಾ ‌ಅಕಾಡೆಮಿಯಿಂದ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು‌ರಿಗೆ ಗೌರವ ಡಾಕ್ಟರೇಟ್

Suddi Udaya

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya

ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣ‌ ವಜಾಗೊಳಿಸಿದ ಹೈಕೋರ್ಟ್

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಪೌಷ್ಠಿಕ ಆಹಾರ ಮತ್ತು ಮಾನಸಿಕ ಆರೋಗ್ಯ” ಕಾರ್ಯಕ್ರಮ

Suddi Udaya

ಮತ ಚಲಾಯಿಸಿದ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಹಿಲನ್

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಬಿಲ್ಲವ ಸಂಘ ಬೇಹರಿನ್ ಅಧ್ಯಕ್ಷ ಹರೀಶ್ ಪೂಜಾರಿ

Suddi Udaya
error: Content is protected !!