September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನಲ್ಲಿ ಡಾ. ಬಿ. ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಉಜಿರೆ ಇದರ ಆಶ್ರಯದಲ್ಲಿ ಡಾ ಬಿ ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ ಸರಣಿಯ ಮಾಲಿಕೆ -1 ಜಾಗತಿಕ ತಂತ್ರಜ್ಞಾನ ಹಾಗೂ ಭಾರತೀಯರ ಕೌಶಲ್ಯ ಕ್ಷಮತೆ ಎಂಬ ವಿಷಯದ ಬಗ್ಗೆ ಇಂಗ್ಲೆಂಡ್ ನ ಏರ್ಬಸ್ ವಿಮಾನ ಕಂಪನಿಯ ತಂತ್ರಜ್ಞ ಯೋಗಿಂದ್ರ ಮರವಂತೆ ಇವರಿಂದ ನಡೆಯಿತು.

ಕಾರ್ಯಕ್ರಮದ ಮೊದಲಿಗೆ ಈ ವಿಶೇಷ ಉಪನ್ಯಾಸ ಸರಣಿಯನ್ನು ದಿವಂಗತ ಡಾ ಬಿ ಯಶೋವರ್ಮ ರವರ ಧರ್ಮಪತ್ನಿ ಶ್ರೀಮತಿ ಸೋನಿಯಾ ಯಶೋವರ್ಮ ಅವರಿಂದ ಉದ್ಘಾಟನೆಗೊಂಡಿತು. ಈ ವೇಳೆ ಮಾತಾಡಿದ ಅವರು ದಿವಂಗತ ಡಾ ಬಿ ಯಶೋವರ್ಮ ರವರ ಸಾರ್ಥಕ ಮತ್ತು ಶಿಸ್ತುಬದ್ಧ ಬದುಕು ಎಲ್ಲರಿಗೂ ಪ್ರೇರಣೆ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ನಂತರ ಉಪನ್ಯಾಸ ಕಾರ್ಯಕ್ರಮ ನಡೆಸಿಕೊಟ್ಟ ಖ್ಯಾತ ಲೇಖಕ ಅಂಕಣಕಾರ ವಿಮಾನ ಕಂಪನಿಯ ತಂತ್ರಜ್ಞ ಯೋಗಿಂದ್ರ ಮರವಂತೆ ಅವರು ಜಗತ್ತಿನ ತಂತ್ರಜ್ಞಾನ ಮತ್ತು ಅದಕ್ಕೆ ಭಾರತೀಯ ವಿಜ್ಞಾನಿಗಳ ಕೊಡುಗೆ ಹಾಗೂ ಹೊಸ ಹೊಸ ತಂತ್ರಜ್ಞಾನಗಳ ಬಗ್ಗೆಗೆ ತಮ್ಮ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.

ಕಾರ್ಯಕ್ರಮವನ್ನು ಕಾಲೇಜಿನ ಮ್ಯಾನೇಜರ್ ಚಂದ್ರನಾಥ್ ಜೈನ್ ಮತ್ತು ಮಿಥುನ್ ಜೈನ್ ವ್ಯವಸ್ಥಿತವಾಗಿ ಆಯೋಜನೆ ಮಾಡಿದ್ದರು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮ, ನಿಖಿತ್ ಧನ್ಯವಾದವಿತ್ತರು. ಸಂಪತ್ ಕಾರ್ಯಕ್ರಮ ನಿರೂಪಿಸಿದರು.

Related posts

ಲಾಯಿಲ: ಕುಂಟಿನಿಯಲ್ಲಿ ಮರ್ಹೂಂ ಸಾಹುಲ್ ಹಮೀದ್ ಉಜಿರೆ ರವರಿಗೆ ಮನೆ ಹಸ್ತಾಂತರ

Suddi Udaya

ಮಡಂತ್ಯಾರು ಜೇಸಿ ಸಪ್ತಾಹ ವಿಜಯ ಎಸ್.ಸಾಲಿಯಾನ್‌ರಿಗೆ ಉದ್ಯಮರತ್ನ ಪುರಸ್ಕಾರ”

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಗುರುವಾಯನಕೆರೆಯ ಕೆರೆ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya

ಮೆಸ್ಕಾಂ – ಹುಣ್ಸೆಕಟ್ಟೆ ರಸ್ತೆಯಲ್ಲಿ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಹುಣ್ಸೆಕಟ್ಟೆ ಭಜನಾ ಮಂಡಳಿಯ ಸದಸ್ಯರು

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ದೇವರ ಪ್ರತಿಷ್ಠಾಪನೆ ಹಾಗೂ ಶ್ರೀರಾಮ ಮಂದಿರ ಲೋಕಾರ್ಪಣೆ: ದೀಪಾಲಂಕಾರದ ಮೂಲಕ ಸಂಭ್ರಮಾಚರಣೆಗೆ ಸಜ್ಜಾಗುತ್ತಿರುವ ಮಡಂತ್ಯಾರುವಿನ ಅಂಗಡಿ ಮುಂಗಟ್ಟುಗಳು

Suddi Udaya
error: Content is protected !!