23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನಲ್ಲಿ ಡಾ. ಬಿ. ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಉಜಿರೆ ಇದರ ಆಶ್ರಯದಲ್ಲಿ ಡಾ ಬಿ ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ ಸರಣಿಯ ಮಾಲಿಕೆ -1 ಜಾಗತಿಕ ತಂತ್ರಜ್ಞಾನ ಹಾಗೂ ಭಾರತೀಯರ ಕೌಶಲ್ಯ ಕ್ಷಮತೆ ಎಂಬ ವಿಷಯದ ಬಗ್ಗೆ ಇಂಗ್ಲೆಂಡ್ ನ ಏರ್ಬಸ್ ವಿಮಾನ ಕಂಪನಿಯ ತಂತ್ರಜ್ಞ ಯೋಗಿಂದ್ರ ಮರವಂತೆ ಇವರಿಂದ ನಡೆಯಿತು.

ಕಾರ್ಯಕ್ರಮದ ಮೊದಲಿಗೆ ಈ ವಿಶೇಷ ಉಪನ್ಯಾಸ ಸರಣಿಯನ್ನು ದಿವಂಗತ ಡಾ ಬಿ ಯಶೋವರ್ಮ ರವರ ಧರ್ಮಪತ್ನಿ ಶ್ರೀಮತಿ ಸೋನಿಯಾ ಯಶೋವರ್ಮ ಅವರಿಂದ ಉದ್ಘಾಟನೆಗೊಂಡಿತು. ಈ ವೇಳೆ ಮಾತಾಡಿದ ಅವರು ದಿವಂಗತ ಡಾ ಬಿ ಯಶೋವರ್ಮ ರವರ ಸಾರ್ಥಕ ಮತ್ತು ಶಿಸ್ತುಬದ್ಧ ಬದುಕು ಎಲ್ಲರಿಗೂ ಪ್ರೇರಣೆ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ನಂತರ ಉಪನ್ಯಾಸ ಕಾರ್ಯಕ್ರಮ ನಡೆಸಿಕೊಟ್ಟ ಖ್ಯಾತ ಲೇಖಕ ಅಂಕಣಕಾರ ವಿಮಾನ ಕಂಪನಿಯ ತಂತ್ರಜ್ಞ ಯೋಗಿಂದ್ರ ಮರವಂತೆ ಅವರು ಜಗತ್ತಿನ ತಂತ್ರಜ್ಞಾನ ಮತ್ತು ಅದಕ್ಕೆ ಭಾರತೀಯ ವಿಜ್ಞಾನಿಗಳ ಕೊಡುಗೆ ಹಾಗೂ ಹೊಸ ಹೊಸ ತಂತ್ರಜ್ಞಾನಗಳ ಬಗ್ಗೆಗೆ ತಮ್ಮ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.

ಕಾರ್ಯಕ್ರಮವನ್ನು ಕಾಲೇಜಿನ ಮ್ಯಾನೇಜರ್ ಚಂದ್ರನಾಥ್ ಜೈನ್ ಮತ್ತು ಮಿಥುನ್ ಜೈನ್ ವ್ಯವಸ್ಥಿತವಾಗಿ ಆಯೋಜನೆ ಮಾಡಿದ್ದರು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮ, ನಿಖಿತ್ ಧನ್ಯವಾದವಿತ್ತರು. ಸಂಪತ್ ಕಾರ್ಯಕ್ರಮ ನಿರೂಪಿಸಿದರು.

Related posts

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಪುದುವೆಟ್ಟು ಶ್ರೀ .ಧ.ಮಂ.ಅನುದಾನಿತ .ಹಿ.ಪ್ರಾ.ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಜಸ್ಟ್ ರೈಡ್ ನೋಡುತ್ತೇನೆಂದು ಬೈಕ್ ತೆಗೆದುಕೊಂಡಾತ ವಾಪಸ್ ಬರಲೇ ಇಲ್ಲ: ಇತ್ತೆ ಬರುವೆ ಎಂದು ಹೇಳಿ ಹೋದಾತನೂ ಇಲ್ಲ…ಬೈಕೂ ಇಲ್ಲ…:ಕಾಶಿಪಟ್ಣದ ಯುವಕ ಇಶಾನ್ ಪೂಜಾರಿಯರಿಂದ ಮೂಡಬಿದ್ರೆ ಪೋಲೀಸರಿಗೆ ದೂರು: ಬೈಕ್ ಸಹಿತ ಇಶಾನ್ ಶೆಟ್ಟಿ ಉಚ್ಚಿಲ್ ಪೊಲೀಸರ ವಶ

Suddi Udaya

ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 97

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘದ ಸಿಬ್ಬಂದಿ ಪ್ರಿಯಾ ಡಿಸೋಜಾರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ; 2 ನೇ ಅವಧಿಗೆ ಅಧ್ಯಕ್ಷರಾಗಿ ಸುಧಾಕರ ಭಂಡಾರಿ, ಉಪಾಧ್ಯಕ್ಷರಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya
error: Content is protected !!