July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನಲ್ಲಿ ಡಾ. ಬಿ. ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಉಜಿರೆ ಇದರ ಆಶ್ರಯದಲ್ಲಿ ಡಾ ಬಿ ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ ಸರಣಿಯ ಮಾಲಿಕೆ -1 ಜಾಗತಿಕ ತಂತ್ರಜ್ಞಾನ ಹಾಗೂ ಭಾರತೀಯರ ಕೌಶಲ್ಯ ಕ್ಷಮತೆ ಎಂಬ ವಿಷಯದ ಬಗ್ಗೆ ಇಂಗ್ಲೆಂಡ್ ನ ಏರ್ಬಸ್ ವಿಮಾನ ಕಂಪನಿಯ ತಂತ್ರಜ್ಞ ಯೋಗಿಂದ್ರ ಮರವಂತೆ ಇವರಿಂದ ನಡೆಯಿತು.

ಕಾರ್ಯಕ್ರಮದ ಮೊದಲಿಗೆ ಈ ವಿಶೇಷ ಉಪನ್ಯಾಸ ಸರಣಿಯನ್ನು ದಿವಂಗತ ಡಾ ಬಿ ಯಶೋವರ್ಮ ರವರ ಧರ್ಮಪತ್ನಿ ಶ್ರೀಮತಿ ಸೋನಿಯಾ ಯಶೋವರ್ಮ ಅವರಿಂದ ಉದ್ಘಾಟನೆಗೊಂಡಿತು. ಈ ವೇಳೆ ಮಾತಾಡಿದ ಅವರು ದಿವಂಗತ ಡಾ ಬಿ ಯಶೋವರ್ಮ ರವರ ಸಾರ್ಥಕ ಮತ್ತು ಶಿಸ್ತುಬದ್ಧ ಬದುಕು ಎಲ್ಲರಿಗೂ ಪ್ರೇರಣೆ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ನಂತರ ಉಪನ್ಯಾಸ ಕಾರ್ಯಕ್ರಮ ನಡೆಸಿಕೊಟ್ಟ ಖ್ಯಾತ ಲೇಖಕ ಅಂಕಣಕಾರ ವಿಮಾನ ಕಂಪನಿಯ ತಂತ್ರಜ್ಞ ಯೋಗಿಂದ್ರ ಮರವಂತೆ ಅವರು ಜಗತ್ತಿನ ತಂತ್ರಜ್ಞಾನ ಮತ್ತು ಅದಕ್ಕೆ ಭಾರತೀಯ ವಿಜ್ಞಾನಿಗಳ ಕೊಡುಗೆ ಹಾಗೂ ಹೊಸ ಹೊಸ ತಂತ್ರಜ್ಞಾನಗಳ ಬಗ್ಗೆಗೆ ತಮ್ಮ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.

ಕಾರ್ಯಕ್ರಮವನ್ನು ಕಾಲೇಜಿನ ಮ್ಯಾನೇಜರ್ ಚಂದ್ರನಾಥ್ ಜೈನ್ ಮತ್ತು ಮಿಥುನ್ ಜೈನ್ ವ್ಯವಸ್ಥಿತವಾಗಿ ಆಯೋಜನೆ ಮಾಡಿದ್ದರು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮ, ನಿಖಿತ್ ಧನ್ಯವಾದವಿತ್ತರು. ಸಂಪತ್ ಕಾರ್ಯಕ್ರಮ ನಿರೂಪಿಸಿದರು.

Related posts

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುರೇಶ ಗೌಡ್ರ ರವರಿಗೆ ಸನ್ಮಾನ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನ

Suddi Udaya

ಅಳದಂಗಡಿ ಆಮಂತ್ರಣ ಪ್ರತಿಷ್ಠಾನ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ತುಳು ಸಿಂಗಾರ ಚೆನ್ನೆಮಣೆ ಸ್ಪರ್ಧೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಕಾರ್ಯಕ್ಷೇತ್ರದಲ್ಲಿ ಬಡಕುಟುಂಬಗಳಿಗೆ ಅಕ್ಕಿ ಮತ್ತು ದಿನಸಿ ಸಾಮಾಗ್ರಿ ವಿತರಣೆ

Suddi Udaya

ಕಣಿಯೂರು ಅಶೋಕ್ ಕುಲಾಲ್ ರಿಂದ ಖಂಡಿಗ ವಾಸಪ್ಪ ಗೌಡರ ಚಿಕಿತ್ಸೆಗೆ ಸಹಾಯಧನ ಹಸ್ತಾಂತರ

Suddi Udaya

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ವಾಸ್ತುಶಿಲ್ಪಿ ಪ್ರಸಾದ್ ಮುನಿಯoಗಳರವರು ಭೇಟಿ: ಕಾಮಗಾರಿಯ ಬಗ್ಗೆ ಸಮಾಲೋಚನೆ

Suddi Udaya
error: Content is protected !!