25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪಾಸ್ಕ ಕಾಲದ ನಲವತ್ತನೆ ಶುಭ ಶುಕ್ರವಾರದ ಶಿಲುಬೆಯ ಹಾದಿ ದೇವಗಿರಿಯಲ್ಲಿ ಸಂಪನ್ನ

ಬೆಳ್ತಂಗಡಿ: ಕ್ರೈಸ್ತರ ಅತ್ಯಂತ ಪವಿತ್ರ ಹಬ್ಬ ವಾದ ಈಸ್ಟರ್ ಗೆ ಸಿದ್ಧತೆಯಾಗಿ ಆಚರಿಸುವ ವ್ರತಕಾಲ ಇಂದು ನಲವತ್ತನೇ ದಿನವನ್ನು ಪ್ರವೇಶಿಸಿದೆ. ಇದರ ಪ್ರಯುಕ್ತ ಬೆಳ್ತಂಗಡಿ ಧರ್ಮ ಪ್ರಾಂತ್ಯ ದ ಶಿಲುಬೆಯ ಹಾದಿಯ ಪುಣ್ಯ ಕ್ಷೇತ್ರ ಗಂಡಿಬಾಗಿಲಿನ ದೇವಗಿರಿ ಶಿಲುಬೆಯ ಹಾದಿ ಯಶಸ್ವಿಯಾಗಿ ಸಂಪನ್ನಗೊಂಡಿತು.

ಧರ್ಮ ಪ್ರಾಂತ್ಯದ ವಿವಿದ ಧರ್ಮ ಕೇಂದ್ರಗಳಿಂದ ಮುಂಜಾನೆ ಯಿಂದಲೇ ದೇವಗಿರಿಯ ಸಂತ ಜುದರ ದೇವಾಲಯದ ಅಂಗಳದಲ್ಲಿ ಸೇರಿ ಬಲಿಪೂಜೆಯನ್ನರ್ಪಿಸಿ ಕೈಗಳಲ್ಲಿ ಸಣ್ಣ ಶಿಲುಭೆಯ ಹರಕೆಯನ್ನೋತ್ತು ದೇವಗಿರಿ ಬೆಟ್ಟವನ್ನು ಲೋಕ ರಕ್ಷಕ ಯೇಸುವಿನ
ಯಾತನೆಯನ್ನು ಸ್ಮರಿಸಿ ಶಿಲುಭೆಯ ಹಾದಿಯ ಹಾಡು ಮತ್ತು ಪ್ರಾರ್ಥನೆ ಯೊಂದಿಗೆ ಬೆಟ್ಟ ವನ್ನೇರಿದರು. ನಿನ್ನೆಯ ಹನ್ನೆರಡು ದಿನಗಳು ಕಠಿಣ ವ್ರತ ಆಚರಣೆಗೆ ಕ್ರೈಸ್ತರು ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ. ಇಷ್ಟಾರ್ಥ ಈಡೇರಿಕೆ, ಹಾಗೂ ಪಾಪ ವಿಮೋಚನೆ ಗಾಗಿ ಕ್ರೈಸ್ತರು ಇದರಲ್ಲಿ ಭಾಗವಹಿಸಿ ಪ್ರಾರ್ಥಿಸುತ್ತಾರೆ. ಪ್ರತಿ ವರ್ಷವೂ ವಿವಿಧ ಸ್ಥಳಗಳಿಂದ ಧರ್ಮ ಗುರುಗಳೂ, ಭಗೀನಿಯರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ.

Related posts

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

Suddi Udaya

ಲಾಯಿಲ: ಗಾಂಧಿನಗರದಲ್ಲಿ ರಸ್ತೆಕಾಮಗಾರಿ ಲೋಕಾರ್ಪಣೆ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ರವರ ನೇತೃತ್ವದಲ್ಲಿ ಮುದರಂಗಡಿಯಲ್ಲಿ ಸನ್ಮಾನ

Suddi Udaya

ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ

Suddi Udaya

ಅಮೃತ್ ಮಿತ್ರ 2.0 ಮಿಷನ್ ಯೋಜನೆಯಡಿ ಕುಡಿಯುವ ನೀರಿನ, ನೀರಿನ ಗುಣಮಟ್ಟದ ಪರೀಕ್ಷೆಯ ಕುರಿತಾದ ಪ್ರಾಯೋಗಿಕ ತರಬೇತಿ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮೂರನೇ ಅಂತರಾಷ್ಟ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಹಾಸಮ್ಮೇಳನ ಉದ್ಘಾಟನೆ

Suddi Udaya
error: Content is protected !!