24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪಾಸ್ಕ ಕಾಲದ ನಲವತ್ತನೆ ಶುಭ ಶುಕ್ರವಾರದ ಶಿಲುಬೆಯ ಹಾದಿ ದೇವಗಿರಿಯಲ್ಲಿ ಸಂಪನ್ನ

ಬೆಳ್ತಂಗಡಿ: ಕ್ರೈಸ್ತರ ಅತ್ಯಂತ ಪವಿತ್ರ ಹಬ್ಬ ವಾದ ಈಸ್ಟರ್ ಗೆ ಸಿದ್ಧತೆಯಾಗಿ ಆಚರಿಸುವ ವ್ರತಕಾಲ ಇಂದು ನಲವತ್ತನೇ ದಿನವನ್ನು ಪ್ರವೇಶಿಸಿದೆ. ಇದರ ಪ್ರಯುಕ್ತ ಬೆಳ್ತಂಗಡಿ ಧರ್ಮ ಪ್ರಾಂತ್ಯ ದ ಶಿಲುಬೆಯ ಹಾದಿಯ ಪುಣ್ಯ ಕ್ಷೇತ್ರ ಗಂಡಿಬಾಗಿಲಿನ ದೇವಗಿರಿ ಶಿಲುಬೆಯ ಹಾದಿ ಯಶಸ್ವಿಯಾಗಿ ಸಂಪನ್ನಗೊಂಡಿತು.

ಧರ್ಮ ಪ್ರಾಂತ್ಯದ ವಿವಿದ ಧರ್ಮ ಕೇಂದ್ರಗಳಿಂದ ಮುಂಜಾನೆ ಯಿಂದಲೇ ದೇವಗಿರಿಯ ಸಂತ ಜುದರ ದೇವಾಲಯದ ಅಂಗಳದಲ್ಲಿ ಸೇರಿ ಬಲಿಪೂಜೆಯನ್ನರ್ಪಿಸಿ ಕೈಗಳಲ್ಲಿ ಸಣ್ಣ ಶಿಲುಭೆಯ ಹರಕೆಯನ್ನೋತ್ತು ದೇವಗಿರಿ ಬೆಟ್ಟವನ್ನು ಲೋಕ ರಕ್ಷಕ ಯೇಸುವಿನ
ಯಾತನೆಯನ್ನು ಸ್ಮರಿಸಿ ಶಿಲುಭೆಯ ಹಾದಿಯ ಹಾಡು ಮತ್ತು ಪ್ರಾರ್ಥನೆ ಯೊಂದಿಗೆ ಬೆಟ್ಟ ವನ್ನೇರಿದರು. ನಿನ್ನೆಯ ಹನ್ನೆರಡು ದಿನಗಳು ಕಠಿಣ ವ್ರತ ಆಚರಣೆಗೆ ಕ್ರೈಸ್ತರು ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ. ಇಷ್ಟಾರ್ಥ ಈಡೇರಿಕೆ, ಹಾಗೂ ಪಾಪ ವಿಮೋಚನೆ ಗಾಗಿ ಕ್ರೈಸ್ತರು ಇದರಲ್ಲಿ ಭಾಗವಹಿಸಿ ಪ್ರಾರ್ಥಿಸುತ್ತಾರೆ. ಪ್ರತಿ ವರ್ಷವೂ ವಿವಿಧ ಸ್ಥಳಗಳಿಂದ ಧರ್ಮ ಗುರುಗಳೂ, ಭಗೀನಿಯರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ.

Related posts

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿಯ ತ್ರೈಮಾಸಿಕ ಸಭೆ ಹಾಗೂ ವನಮಹೋತ್ಸವ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಸಮಾಲೋಚನೆ ಸಭೆ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕುಕ್ಕಾವು ಸೇತುವೆ ಬಳಿ ಧ್ಯಾನಸಕ್ತ ಸದಾಶಿವನ 12 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

Suddi Udaya
error: Content is protected !!