September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪಾಸ್ಕ ಕಾಲದ ನಲವತ್ತನೆ ಶುಭ ಶುಕ್ರವಾರದ ಶಿಲುಬೆಯ ಹಾದಿ ದೇವಗಿರಿಯಲ್ಲಿ ಸಂಪನ್ನ

ಬೆಳ್ತಂಗಡಿ: ಕ್ರೈಸ್ತರ ಅತ್ಯಂತ ಪವಿತ್ರ ಹಬ್ಬ ವಾದ ಈಸ್ಟರ್ ಗೆ ಸಿದ್ಧತೆಯಾಗಿ ಆಚರಿಸುವ ವ್ರತಕಾಲ ಇಂದು ನಲವತ್ತನೇ ದಿನವನ್ನು ಪ್ರವೇಶಿಸಿದೆ. ಇದರ ಪ್ರಯುಕ್ತ ಬೆಳ್ತಂಗಡಿ ಧರ್ಮ ಪ್ರಾಂತ್ಯ ದ ಶಿಲುಬೆಯ ಹಾದಿಯ ಪುಣ್ಯ ಕ್ಷೇತ್ರ ಗಂಡಿಬಾಗಿಲಿನ ದೇವಗಿರಿ ಶಿಲುಬೆಯ ಹಾದಿ ಯಶಸ್ವಿಯಾಗಿ ಸಂಪನ್ನಗೊಂಡಿತು.

ಧರ್ಮ ಪ್ರಾಂತ್ಯದ ವಿವಿದ ಧರ್ಮ ಕೇಂದ್ರಗಳಿಂದ ಮುಂಜಾನೆ ಯಿಂದಲೇ ದೇವಗಿರಿಯ ಸಂತ ಜುದರ ದೇವಾಲಯದ ಅಂಗಳದಲ್ಲಿ ಸೇರಿ ಬಲಿಪೂಜೆಯನ್ನರ್ಪಿಸಿ ಕೈಗಳಲ್ಲಿ ಸಣ್ಣ ಶಿಲುಭೆಯ ಹರಕೆಯನ್ನೋತ್ತು ದೇವಗಿರಿ ಬೆಟ್ಟವನ್ನು ಲೋಕ ರಕ್ಷಕ ಯೇಸುವಿನ
ಯಾತನೆಯನ್ನು ಸ್ಮರಿಸಿ ಶಿಲುಭೆಯ ಹಾದಿಯ ಹಾಡು ಮತ್ತು ಪ್ರಾರ್ಥನೆ ಯೊಂದಿಗೆ ಬೆಟ್ಟ ವನ್ನೇರಿದರು. ನಿನ್ನೆಯ ಹನ್ನೆರಡು ದಿನಗಳು ಕಠಿಣ ವ್ರತ ಆಚರಣೆಗೆ ಕ್ರೈಸ್ತರು ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ. ಇಷ್ಟಾರ್ಥ ಈಡೇರಿಕೆ, ಹಾಗೂ ಪಾಪ ವಿಮೋಚನೆ ಗಾಗಿ ಕ್ರೈಸ್ತರು ಇದರಲ್ಲಿ ಭಾಗವಹಿಸಿ ಪ್ರಾರ್ಥಿಸುತ್ತಾರೆ. ಪ್ರತಿ ವರ್ಷವೂ ವಿವಿಧ ಸ್ಥಳಗಳಿಂದ ಧರ್ಮ ಗುರುಗಳೂ, ಭಗೀನಿಯರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ.

Related posts

ಲಯನ್ಸ್ ಬೆಳ್ತಂಗಡಿ ವತಿಯಿಂದ “ಡ್ರಗ್ಸ್ ಮುಕ್ತ ಬೆಳ್ತಂಗಡಿ” ಅಭಿಯಾನದ ಕರಪತ್ರ ಅನಾವರಣ

Suddi Udaya

ಬೆಳ್ತಂಗಡಿ ಕುಂಬಾರರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು

Suddi Udaya

ಪಾರ್ಶ್ವ ವಾಯು ಸಮಸ್ಯೆಯಿಂದ ಬಳಲುತ್ತಿರುವ ಮಡಂತ್ಯಾರಿನ ಉಮೇಶ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬುರುಡೆ ಚಿನ್ನಯ್ಯನಿಂದ ಎಸ್ಐಟಿ ಗೆ ದೂರು

Suddi Udaya
error: Content is protected !!