ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಪೆರ್ಮುಡದಲ್ಲಿ 31ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಕಂಬಳಕ್ಕೆ ಚಾಲನೆ

ವೇಣೂರು: ಪೆರ್ಮುಡದಲ್ಲಿ 31ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಕಂಬಳಕ್ಕೆ ಇಂದು ಚಾಲನೆ ನೀಡಲಾಯಿತು.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರು ದೀಪ ಬೆಳಗಿಸುವುದರ ಮೂಲಕ ಕಂಬಳ ಉದ್ಘಾಟಿಸಿ ಮಾತನಾಡಿ ತುಳುನಾಡಿನ ಅತ್ಯಂತ ಜನಪ್ರಿಯ ಹಾಗೂ ಶ್ರೀಮಂತ ಜಾನಪದ ಕ್ರೀಡೆ ಕಂಬಳ ಎಂದರು.

ಅಧ್ಯಕ್ಷತೆಯನ್ನು ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಹೆಚ್ ಕೋಟ್ಯಾನ್ ವಹಿಸಿದ್ದರು.

ಉದ್ಘಾಟನಾ ಸಮಾರಂಭದಲ್ಲಿ ವಿಜಯರಾಜ ಅಧಿಕಾರಿ ಮಾರಗುತ್ತು, ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಭಾಸ್ಕರ ಬಲ್ಯಾಯ, ಕುಕ್ಕೇಡಿ ಗ್ರಾ.ಪಂ ಅಧ್ಯಕ್ಷೆ ಅನಿತಾ, ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ತೇಜಾಕ್ಷಿ, ವೇಣೂರು ಗ್ರಾ.ಪಂ ಮಾಜಿ ಅಧ್ಯಕ್ಷ ಸತೀಶ್ ಹೆಗ್ಡೆ, ಪದ್ಮಾಂಬ ಕ್ಯಾಟರಿಂಗ್ ಮಾಲಕ ನಾಗಕುಮಾರ್, ಗುಂಡೂರಿ ಸತ್ಯನಾರಾಯಣ ಭಜನಾ ಸಮಿತಿ ಅಧ್ಯಕ್ಷ ರಮೇಶ್ ಪೂಜಾರಿ ಪಡ್ಡಾಯಿ ಮಜಲು, ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ಶುಭಕರ ಪೂಜಾರಿ ಸಾವ್ಯ, ವೇಣೂರು ಲಯನ್ಸ್ ಕ್ಲಬ್‌ ಅಧ್ಯಕ್ಷ ನಿರಂಜನ್ ಕೆ.ಎಸ್., ಕುಕ್ಕೇಡಿ ಹಾಲು ಉತ್ಪಾದರ ಸಹಕಾರ ಸಂಘದ ದಯಾನಂದ ದೇವಾಡಿಗ, ಬಳಂಜ ಗ್ರಾ.ಪಂ ಸದಸ್ಯ ರವೀಂದ್ರ ಬಿ ಅಮೀನ್, ವೇಣೂರು ರಮ್ಯಾ ಫ್ಯಾನ್ಸಿಯ ನಾರಾಯಣ ಪೂಜಾರಿ, ಕುಕ್ಕೇಡಿ ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಸದಾನಂದ, ಎಂ.ರಫೀಕ್ ಬಾಂಬಿಲ, ಜಿ.ಪಂ ಮಾಜಿ ಸದಸ್ಯ ಶೇಖರ ಕುಕ್ಕೇಡಿ, ಕಂಬಳದ ಸಲಹೆಗಾರರಾದ ಕರುಣಾಕರ, ಸ್ಟೀವನ್ ಮೋನಿಸ್ ಹಾಗೂ ಕಂಬಳ ಸಮಿತಿ ಪದಾಧಿಕಾರಿಗಳು, ಕಂಬಳ ಅಭಿಮಾನಿಗಳು ಉಪಸ್ಥಿತರಿದ್ದರು.

ಕಂಬಳ ಸಮಿತಿ ಅಧ್ಯಕ್ಷ ಹಾಗೂ ಬೆಳ್ತಂಗಡಿ ಗು.ನಾ.ಸೇ.ಸಂ ಪ್ರ.ಕಾ. ನಿತೀಶ್ ಹೆಚ್ ಕೋಟ್ಯಾನ್ ಸ್ವಾಗತಿಸಿದರು.

Related posts

ಡಿ.29-31: ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya

ಉಜಿರೆ ಶಾಂತಿವನದಲ್ಲಿ “ಅತಿಸ್ಥೂಲ ನಿರ್ವಹಣೆಗೆ ಯೋಗ ಮತ್ತು ನೈಸರ್ಗಿಕ ಚಿಕಿತ್ಸೆ ಕಾರ್ಯಾಗಾರ ಸಂಪನ್ನ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಪಡ್ಪು ಶಾಖಾ ಕಟ್ಟಡ ಶುಭಾರಂಭ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕಾಶಿಬೆಟ್ಟು ಹೆದ್ದಾರಿಯಲ್ಲಿ ನಿಮಾ೯ಣವಾದ ಬಾವಿಯಾಕಾರದ ಹೊಂಡ, ಗುಂಡಿಗಳು ಸಂಚಾರಕ್ಕೆ ವಾಹನಗಳ ಪರದಾಟ, ಪ್ರತಿದಿನ ವಾಹನ ಬ್ಲಾಕ್

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಾಜಿ ಅಧ್ಯಕ್ಷೆ ಶ್ರೀಮತಿ ಜೇಸಿಂತಾ ಮೋನಿಸ್ ನಿಧನ

Suddi Udaya

ಧರ್ಮಸ್ಥಳ: 13ನೇ ಸ್ಥಳದಲ್ಲಿ ಜಿ.ಪಿ.ಆರ್ ಕಾರ್ಯಾಚರಣೆ: ಮಧ್ಯಾಹ್ನದ ಬಳಿಕ ಶವದ ಅವಶೇಷಕ್ಕಾಗಿ ಶೋಧ ಕಾರ್ಯಾಚರಣೆ

Suddi Udaya
error: Content is protected !!