25.5 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಧಾರ್ಮಿಕವರದಿ

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ; ಚಂಡಿಕಾಹೋಮ

ಶಿಶಿಲ: ಇಲ್ಲಿಯ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಶ್ರೀ ಗಡಿ ಚಾಮುಂಡಿ ಅಮ್ಮನವರ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ಮುದ್ಯ ಶ್ರೀ ಪಾರ್ವತಿ ಪಂಚಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ಕೃಷ್ಣಪ್ರಸಾದ ಉಡುಪರ ನೇತೃತ್ವದಲ್ಲಿ ನಡೆಯಿತು.

ಮಾ.22ರಂದು ಬೆಳಿಗ್ಗೆ ಸ್ವಸ್ತಿ ಪುಣ್ಯಾಹವಾಚನ, ಗಣಪತಿ ಹೋಮ, ಐಕ್ಯಮತ್ಯ ಹೋಮ, ತತ್ತ್ವಹೋಮ ಕಲಶ, ಹೊರೆಕಾಣಿಕೆ ಸಮರ್ಪಣೆ, ಮಹಾಪೂಜೆ, ತೀರ್ಥಪ್ರಸಾದ ವಿತರಣೆ, ರಾತ್ರಿ ದುರ್ಗಾಪೂಜೆ ಮತ್ತು ಮಹಾಪೂಜೆ, ಶ್ರೀ ರಾಮಾಂಜನೇಯ ಭಜನಾ ಮಂಡಳಿ ಅಡ್ಡಹಳ್ಳ, ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.

ಮಾ.23(ಇಂದು) ಸ್ವಸ್ತಿ ಪುಣ್ಯಾಹವಾಚನ, ಗಣಹೋಮ, ಚಂಡಿಕಾಹೋಮ, ಮಹಾಪೂಜೆ, ತೀರ್ಥಪ್ರಸಾದ ವಿತರಣೆ, ಹಾಗೂ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಗೌರವಾಧ್ಯಕ್ಷ ಶ್ರೀನಿವಾಸ್ ಮುಡೆತ್ತಾಯ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಸುಬ್ರಹ್ಮಣ್ಯ ನೆಲ್ಲಿತ್ತಾಯ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಪರಮೇಶ್ವರ ಗೌಡ ಮಂಡೆಕರ, ಉಪಾಧ್ಯಕ್ಷ ಹರೀಶ್ ಗೌಡ ಹೊಳೆಗಂಡಿ, ಪ್ರಧಾನ ಕಾರ್ಯದರ್ಶಿ ಧರ್ಮಪಾಲಗೌಡ, ಕಾರ್ಯದರ್ಶಿ ಪುನೀತ್ ಗೌಡ, ಕೋಶಾಧಿಕಾರಿ ಮಾಧವ ಪೂಜಾರಿ ದೇನೋಡಿ, ಸದಸ್ಯ ಕುಶಾಲಪ್ಪ ಗೌಡ ಜಿ. ಬದ್ರಿಜಾಲು ಹಾಗೂ ಆಡಳಿತ ಸಮಿತಿಯ ಸದಸ್ಯರು, ಸಲಹೆಗಾರರು, ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

ಸಂಜೆ 6 ಗಂಟೆಗೆ ಮಂಟಪ ಸಂಸ್ಕಾರ, ದುರ್ಗಾನಮಸ್ಕಾರ ಪೂಜೆ, ಮಹಾಪೂಜೆ, ಸಂಜೆ 7.00ರಿಂದ ಭಜನಾ ಕಾರ್ಯಕ್ರಮ, ಮತ್ಸ್ಯ ಶಿವದುರ್ಗಾ ಭಜನಾ ಮಂಡಳಿ ಶಿಶಿಲ, ಮಾ.24 ಪ್ರಾತ: ಕಾಲ 6.00 ಸ್ವಸ್ತಿ ಪುಣ್ಯಾಹವಾಚನ, ಬೆಳಗ್ಗೆ 6.30 ಕ್ಕೆ ಗಣಹೋಮ, ಅಷ್ಟೋತ್ತರ ಶತಕಲಶ ಪೂಜೆ ಬೆಳಗ್ಗೆ8.00ಕ್ಕೆ ಭಜನಾ ಕಾರ್ಯಕ್ರಮ ಊರ ವಿವಿಧ ಭಜನಾ ಮಂಡಳಿಗಳಿಂದ ಹಾಗೂ 9.58 ರ ವೃಷಭ ಲಗ್ನ ಸುಮುಹೂರ್ತದಲ್ಲಿ, ಚಾಮುಂಡೇಶ್ವರಿಗೆ “ಬ್ರಹ್ಮಕಲಶಾಭಿಷೇಕ, ಮಹಾಪೂಜೆ, ತೀರ್ಥಪ್ರಸಾದ ವಿತರಣೆ ನಡೆಯಲಿದೆ.

Related posts

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವೈದ್ಯಕೀಯ ನೆರವು

Suddi Udaya

ಮುಂಡಾಜೆ ಪ.ಪೂ. ಕಾಲೇಜು ಪ್ರಾರಂಭೋತ್ಸವ

Suddi Udaya

ಬಾಂಜರು ಮಲೆ ಶೇ. 100 ಮತದಾನ, ಮತದಾರರಿಗೆ ಶಾಸಕ ಹರೀಶ್ ಪೂಂಜ ಅಭಿನಂದನೆ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ “ಭವಾನ್ ವಿದ್ಯಾಮ್ ದೇಹಿ” ಅಭಿಯಾನ

Suddi Udaya

ಮೊಗ್ರು ಶ್ರೀರಾಮ ಶಿಶುಮಂದಿರದಲ್ಲಿ ಚಿಣ್ಣರ ಚಿಲಿಪಿಲಿ – 2025 ಬೇಸಿಗೆ ಶಿಬಿರ ಸಮಾರೋಪ

Suddi Udaya
error: Content is protected !!