26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನಲ್ಲಿ ಡಾ. ಬಿ. ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಉಜಿರೆ ಇದರ ಆಶ್ರಯದಲ್ಲಿ ಡಾ ಬಿ ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ ಸರಣಿಯ ಮಾಲಿಕೆ -1 ಜಾಗತಿಕ ತಂತ್ರಜ್ಞಾನ ಹಾಗೂ ಭಾರತೀಯರ ಕೌಶಲ್ಯ ಕ್ಷಮತೆ ಎಂಬ ವಿಷಯದ ಬಗ್ಗೆ ಇಂಗ್ಲೆಂಡ್ ನ ಏರ್ಬಸ್ ವಿಮಾನ ಕಂಪನಿಯ ತಂತ್ರಜ್ಞ ಯೋಗಿಂದ್ರ ಮರವಂತೆ ಇವರಿಂದ ನಡೆಯಿತು.

ಕಾರ್ಯಕ್ರಮದ ಮೊದಲಿಗೆ ಈ ವಿಶೇಷ ಉಪನ್ಯಾಸ ಸರಣಿಯನ್ನು ದಿವಂಗತ ಡಾ ಬಿ ಯಶೋವರ್ಮ ರವರ ಧರ್ಮಪತ್ನಿ ಶ್ರೀಮತಿ ಸೋನಿಯಾ ಯಶೋವರ್ಮ ಅವರಿಂದ ಉದ್ಘಾಟನೆಗೊಂಡಿತು. ಈ ವೇಳೆ ಮಾತಾಡಿದ ಅವರು ದಿವಂಗತ ಡಾ ಬಿ ಯಶೋವರ್ಮ ರವರ ಸಾರ್ಥಕ ಮತ್ತು ಶಿಸ್ತುಬದ್ಧ ಬದುಕು ಎಲ್ಲರಿಗೂ ಪ್ರೇರಣೆ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ನಂತರ ಉಪನ್ಯಾಸ ಕಾರ್ಯಕ್ರಮ ನಡೆಸಿಕೊಟ್ಟ ಖ್ಯಾತ ಲೇಖಕ ಅಂಕಣಕಾರ ವಿಮಾನ ಕಂಪನಿಯ ತಂತ್ರಜ್ಞ ಯೋಗಿಂದ್ರ ಮರವಂತೆ ಅವರು ಜಗತ್ತಿನ ತಂತ್ರಜ್ಞಾನ ಮತ್ತು ಅದಕ್ಕೆ ಭಾರತೀಯ ವಿಜ್ಞಾನಿಗಳ ಕೊಡುಗೆ ಹಾಗೂ ಹೊಸ ಹೊಸ ತಂತ್ರಜ್ಞಾನಗಳ ಬಗ್ಗೆಗೆ ತಮ್ಮ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.

ಕಾರ್ಯಕ್ರಮವನ್ನು ಕಾಲೇಜಿನ ಮ್ಯಾನೇಜರ್ ಚಂದ್ರನಾಥ್ ಜೈನ್ ಮತ್ತು ಮಿಥುನ್ ಜೈನ್ ವ್ಯವಸ್ಥಿತವಾಗಿ ಆಯೋಜನೆ ಮಾಡಿದ್ದರು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮ, ನಿಖಿತ್ ಧನ್ಯವಾದವಿತ್ತರು. ಸಂಪತ್ ಕಾರ್ಯಕ್ರಮ ನಿರೂಪಿಸಿದರು.

Related posts

ಡಿ.17: ಬೆಳ್ತಂಗಡಿ ತಾಲೂಕು18 ನೇ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಸೇನೆಗೆ ಆಯ್ಕೆಗೊಂಡ ಸೃಜನ್ ಕೆ.ಆರ್.

Suddi Udaya

ಜು.16-ಆ.16: ಲಾಯಿಲ ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಆಟಿ ಚಿಕಿತ್ಸಾ ಪ್ಯಾಕೇಜ್

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡರ ಮನೆಗೆ ಕಣಿಯೂರು ಗ್ರಾ.ಪಂ. ನಿಂದ ಭೇಟಿ, ಪರಿಶೀಲನೆ

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಸೇಕ್ರೆಡ್ ಹಾರ್ಟ್ ವಾಳೆಯಲ್ಲಿ ಮನೆ ಹಸ್ತಾಂತರ

Suddi Udaya
error: Content is protected !!