25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನಲ್ಲಿ ಡಾ. ಬಿ. ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಉಜಿರೆ ಇದರ ಆಶ್ರಯದಲ್ಲಿ ಡಾ ಬಿ ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ ಸರಣಿಯ ಮಾಲಿಕೆ -1 ಜಾಗತಿಕ ತಂತ್ರಜ್ಞಾನ ಹಾಗೂ ಭಾರತೀಯರ ಕೌಶಲ್ಯ ಕ್ಷಮತೆ ಎಂಬ ವಿಷಯದ ಬಗ್ಗೆ ಇಂಗ್ಲೆಂಡ್ ನ ಏರ್ಬಸ್ ವಿಮಾನ ಕಂಪನಿಯ ತಂತ್ರಜ್ಞ ಯೋಗಿಂದ್ರ ಮರವಂತೆ ಇವರಿಂದ ನಡೆಯಿತು.

ಕಾರ್ಯಕ್ರಮದ ಮೊದಲಿಗೆ ಈ ವಿಶೇಷ ಉಪನ್ಯಾಸ ಸರಣಿಯನ್ನು ದಿವಂಗತ ಡಾ ಬಿ ಯಶೋವರ್ಮ ರವರ ಧರ್ಮಪತ್ನಿ ಶ್ರೀಮತಿ ಸೋನಿಯಾ ಯಶೋವರ್ಮ ಅವರಿಂದ ಉದ್ಘಾಟನೆಗೊಂಡಿತು. ಈ ವೇಳೆ ಮಾತಾಡಿದ ಅವರು ದಿವಂಗತ ಡಾ ಬಿ ಯಶೋವರ್ಮ ರವರ ಸಾರ್ಥಕ ಮತ್ತು ಶಿಸ್ತುಬದ್ಧ ಬದುಕು ಎಲ್ಲರಿಗೂ ಪ್ರೇರಣೆ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ನಂತರ ಉಪನ್ಯಾಸ ಕಾರ್ಯಕ್ರಮ ನಡೆಸಿಕೊಟ್ಟ ಖ್ಯಾತ ಲೇಖಕ ಅಂಕಣಕಾರ ವಿಮಾನ ಕಂಪನಿಯ ತಂತ್ರಜ್ಞ ಯೋಗಿಂದ್ರ ಮರವಂತೆ ಅವರು ಜಗತ್ತಿನ ತಂತ್ರಜ್ಞಾನ ಮತ್ತು ಅದಕ್ಕೆ ಭಾರತೀಯ ವಿಜ್ಞಾನಿಗಳ ಕೊಡುಗೆ ಹಾಗೂ ಹೊಸ ಹೊಸ ತಂತ್ರಜ್ಞಾನಗಳ ಬಗ್ಗೆಗೆ ತಮ್ಮ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.

ಕಾರ್ಯಕ್ರಮವನ್ನು ಕಾಲೇಜಿನ ಮ್ಯಾನೇಜರ್ ಚಂದ್ರನಾಥ್ ಜೈನ್ ಮತ್ತು ಮಿಥುನ್ ಜೈನ್ ವ್ಯವಸ್ಥಿತವಾಗಿ ಆಯೋಜನೆ ಮಾಡಿದ್ದರು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮ, ನಿಖಿತ್ ಧನ್ಯವಾದವಿತ್ತರು. ಸಂಪತ್ ಕಾರ್ಯಕ್ರಮ ನಿರೂಪಿಸಿದರು.

Related posts

ಪೆರೋಡಿತ್ತಾಯಕಟ್ಟೆ ಶಾಲಾ ಹಳೆ ವಿದ್ಯಾರ್ಥಿ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ರಚನೆ

Suddi Udaya

ಮೇ 5: ‘ನನ್ನ ಬೂತ್ ನನ್ನ ಜವಾಬ್ದಾರಿ’ ಎಂಬ ಧ್ಯೇಯದೊಂದಿಗೆ ಪ್ರಚಾರ ಕಾರ್ಯ ಮಾಡುವಂತೆ ಕರೆ ನೀಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಮುಂಡಾಜೆ ಕೆ.ಎನ್. ಭಟ್ ಶಿರಾಡಿಪಾಲ್ ಅವರ ಶತಮಾನೋತ್ಸವದ ಪ್ರಯುಕ್ತ ಶತನಮನ ಶತಸನ್ಮಾನ ಸರಣಿ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ. ರಾಘವೇಂದ್ರ ಭೇಟಿ

Suddi Udaya

ಗೇರುಕಟ್ಟೆ: ಸ್ನೇಹ ಸಂಗಮ ಆಟೋ-ಚಾಲಕ ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ನಾರಾವಿ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya
error: Content is protected !!